September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮುಡ ಪ್ರಕರಣ ಇದು ಬಿಜೆಪಿಯ‌ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟವಾಗಿದೆ. ಬಿಜೆಪಿ, ಜೆಡಿಎಸ್‌ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಗಳ ಪರವಾಗಿ ಭದ್ರವಾಗಿ ನಿಂತಿದ್ದಾರೆ. ಬಡವರ ಪರವಾಗಿರುವ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳು ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya
error: Content is protected !!