23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

ಬೆಳ್ತಂಗಡಿ: ಮುಡ ಪ್ರಕರಣ ಇದು ಬಿಜೆಪಿಯ‌ ಷಡ್ಯಂತರವಷ್ಟೇ, ಎನ್‌ಡಿಎಯಿಂದ ರಾಜಭವನ ದುರ್ಬಳಕೆ ಮಾಡಿಕೊಂಡಿದೆ. ನಾಡಿನ ಜನಪರ ಮುಖ್ಯಮಂತ್ರಿಗಳ ವಿರುದ್ಧ ಸೇಡಿನ ರಾಜಕೀಯ ನಡೆಯುತ್ತಿದೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟವಾಗಿದೆ. ಬಿಜೆಪಿ, ಜೆಡಿಎಸ್‌ ಪಕ್ಷದ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಗಳ ಪರವಾಗಿ ಭದ್ರವಾಗಿ ನಿಂತಿದ್ದಾರೆ. ಬಡವರ ಪರವಾಗಿರುವ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವವರು ಎನ್ನುವ ಕಾರಣಕ್ಕಾಗಿ ಮುಖ್ಯಮಂತ್ರಿಗಳ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳು ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗ ಅನುಭವಿಸಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya
error: Content is protected !!