25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಭವನದಲ್ಲಿ ನೆರವೇರಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಶ್ರೀಮತಿ ಶ್ವೇತಾ ಹೆಚ್ ಕೆ ವಹಿಸಿದ್ದರು.


ಸಂಘವು ಸದರಿ ಸಾಲಿನಲ್ಲಿ 2.2 ಲಕ್ಷ ಲೀಟರ್ ಹಾಲು ಸಂಗ್ರಹಿಸಿದ್ದು ಸಂಘವು ಒಟ್ಟು 129072 ರೂ.ಗಳ ನಿವ್ವಳ ಲಾಭವನ್ನು ಗಳಿಸಿದೆ. ದಕ್ಷಿಣ ಕನ್ನಡ ಹಾಲು ಒಕ್ಕೂಟ ಶಿಬಿರ ಕಛೇರಿ, ಬೆಳ್ತಂಗಡಿಯ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ಮಾಹಿತಿ ನೀಡಿದರು. ಕಾರ್ಯದರ್ಶಿ ಶ್ರೀಮತಿ ಸಂಧ್ಯಾ ವರದಿ ವಾಚಿಸಿದರು.

ಸಂಘದ ನಿರ್ದೇಶಕಿ ಶ್ರೀಮತಿ ಸುಂದರಿ ಸ್ವಾಗತಿಸಿದರು. ಉಪಾಧ್ಯಕ್ಷೆ ಶ್ರೀಮತಿ ಹೇಮಾವತಿ ವಂದಿಸಿದರು. ಶ್ರೀಮತಿ ದಿವ್ಯ ಪ್ರಾರ್ಥಿಸಿದರು. ಸಂಘದ ನಿರ್ದೇಶಕರು ಉಪಸ್ಥಿತರಿದ್ದು, ಹಾಲು ಪರೀಕ್ಷಕಿ ಶ್ರೀಮತಿ ವೇದಾವತಿ ಸಹಕರಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
error: Content is protected !!