March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಗೋಪಕುಮಾರ್ ಹೇಳಿದರು.


ಅವರು ಸೆ.24 ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರ ಆಯೋಜಿಸಿದ “ಪೀಸ್” ವಿದ್ಯಾರ್ಥಿಸಂಘ ಉದ್ಘಾಟಿಸಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಸಂಘದ ಮೂಲಕ ಶಾಂತಿ ಕಾಪಾಡುವ ಕಾರ್ಯಗಳು ನಿರಂತರ ನಡೆಯಲಿ ಎಂದು ಆಶಿಸಿದರು.


ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್, ಕಾರ್ಯಕ್ರಮದ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ. ಮಹೇಶ್‌ಬಾಬು, ಅಶ್ವಿನಿ ಎಚ್. ಸಿಂಧು ವಿ., ಸಂಘದ ಅಧ್ಯಕ್ಷರಾದ ಅಲಿಷ ಪಿ. ಜಾಯ್ ಉಪಸ್ಥಿತರಿದ್ದರು.


ಕಾರ್ಯದರ್ಶಿ ಕುಮಾರಿ ಚೈತನ್ಯ ಸ್ವಾಗತಿಸಿದರು. ಕುಮಾರಿ ಕೀರ್ತನಾ ಧನ್ಯವಾದವಿತ್ತರು. ಕುಮಾರಿ ಸ್ಟಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!