September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಗೋಪಕುಮಾರ್ ಹೇಳಿದರು.


ಅವರು ಸೆ.24 ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರ ಆಯೋಜಿಸಿದ “ಪೀಸ್” ವಿದ್ಯಾರ್ಥಿಸಂಘ ಉದ್ಘಾಟಿಸಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಸಂಘದ ಮೂಲಕ ಶಾಂತಿ ಕಾಪಾಡುವ ಕಾರ್ಯಗಳು ನಿರಂತರ ನಡೆಯಲಿ ಎಂದು ಆಶಿಸಿದರು.


ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್, ಕಾರ್ಯಕ್ರಮದ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ. ಮಹೇಶ್‌ಬಾಬು, ಅಶ್ವಿನಿ ಎಚ್. ಸಿಂಧು ವಿ., ಸಂಘದ ಅಧ್ಯಕ್ಷರಾದ ಅಲಿಷ ಪಿ. ಜಾಯ್ ಉಪಸ್ಥಿತರಿದ್ದರು.


ಕಾರ್ಯದರ್ಶಿ ಕುಮಾರಿ ಚೈತನ್ಯ ಸ್ವಾಗತಿಸಿದರು. ಕುಮಾರಿ ಕೀರ್ತನಾ ಧನ್ಯವಾದವಿತ್ತರು. ಕುಮಾರಿ ಸ್ಟಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya
error: Content is protected !!