23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

ಉಜಿರೆ: ಗ್ರಾಮಸ್ವರಾಜ್ಯ ಹಾಗೂ ರಾಮ ರಾಜ್ಯದ ಕನಸು ಕಂಡ ಗಾಂಧೀಜಿಯವರು ಯುವಕರಲ್ಲಿ ಸೇವಾ ಮನೋಭಾವನೆ ಮೊದಲು ಬೆಳೆಯಬೇಕು ಎಂದು ಮನ ಮಾಡಿದರು. ಮುಂದೆ ಇವರ ಜನ್ಮ ಶತಾಬ್ದಿಯ ಸಂದರ್ಭದಲ್ಲಿ ಪ್ರಾರಂಭಗೊಂಡದ್ದೆ ಈ ರಾಷ್ಟ್ರೀಯ ಸೇವಾ ಯೋಜನೆ. ವ್ಯಕ್ತಿತ್ವ ವಿಕಸನ, ಶಿಸ್ತು, ಸಮಯಪಾಲನೆ, ಸಹಬಾಳ್ವೆ ಇತ್ಯಾದಿಗಳನ್ನು ಕಲಿತುಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಡೀನ್ ಪ್ರೊ. ವಿಶ್ವನಾಥ ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯ ಅಂಗವಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಗೊತ್ತು ಗುರಿ ಇಲ್ಲದ ಯುವ ಜನತೆಗೆ ಸರಿಯಾದ ಮಾರ್ಗದರ್ಶನ ನೀಡಲು ಇರುವ ಯೋಜನೆಯೇ ಈ ರಾಷ್ಟ್ರೀಯ ಸೇವಾ ಯೋಜನೆಯಾಗಿದೆ ಗ್ರಾಮೀಣ ಜೀವನದ ಪರಿಚಯವಾಗಬೇಕಾದರೆ ಇಂತಹ ಪ್ರಕಲ್ಪಗಳಲ್ಲಿ ಯುವಕರು ತೊಡಗಿಸಿ ಕೊಳ್ಳಬೇಕೆಂದು ಕರೆ ನೀಡಿದರು.

ಪ್ರಾಪ್ತಿ ಅವರು ರಾಷ್ಟ್ರೀಯ ಸೇವಾ ಯೋಜನೆಯ ಪರಿಚಯಾತ್ಮಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ನೂತನವಾದ ಸೂಚನಾ ಫಲಕವನ್ನು ಅನಾವರಣಗೊಳಿಸಲಾಯಿತು ಹಾಗೂ ರಾಷ್ಟ್ರೀಯ ಭಾವೈಕ್ಯತೆ ಶಿಬಿರದಲ್ಲಿ ಪಾಲ್ಗೊಂಡ ಸ್ವಯಂಸೇವಕಿ ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು.

ರಾ.ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಘಟಕದ ನಾಯಕರಾದ ಆದಿತ್ಯ ವಿ. , ಪ್ರಾಪ್ತಿ ಗೌಡ ಉಪಸ್ಥಿತರಿದ್ದರು.

ಆದಿ ಸ್ವಾಗತಿಸಿ , ಯಕ್ಷಿತ್ ವಂದಿಸಿದರು. ಕಾರ್ಯದರ್ಶಿ ಐಶ್ವರ್ಯ ನಿರೂಪಿಸಿದರು. ಸ್ವಯಂ ಸೇವಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಹೊಸಂಗಡಿ: ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗದ ನಿರ್ವಹಣೆ ಕುರಿತು ತರಬೇತಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya
error: Content is protected !!