25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್. ಪಿ ಪೀತಾಂಬರ ಹೇರಾಜೇಯವರು ತಿಳಿಸಿದರು. ಮುಂದುವರಿಯುತ್ತಾ ಕ್ರೀಡಾಪಟುಗಳಿಗೆ ಉತ್ತಮ ದೈಹಿಕ ಸಾಮರ್ಥ್ಯ ಲಭಿಸಬೇಕಾದರೆ ದೇವರ ಮತ್ತು ತಂದೆ ತಾಯಿಗಳ ಆಶೀರ್ವಾದ ಅಗತ್ಯ ಎಂದು ತಿಳಿಸಿದರು. ಶಿಸ್ತಿನಿಂದ ಜೀವನ ನಡೆಸುತ್ತಾ ಗುರುಗಳ ಬಗ್ಗೆ ಗೌರವದಿಂದ ಇರಬೇಕೆಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಶ್ರೀಮತಿ ವಿಶಾಲಾಕ್ಷಿ ಧನ್ಯವಾದವಿತ್ತರು. ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya
error: Content is protected !!