September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್. ಪಿ ಪೀತಾಂಬರ ಹೇರಾಜೇಯವರು ತಿಳಿಸಿದರು. ಮುಂದುವರಿಯುತ್ತಾ ಕ್ರೀಡಾಪಟುಗಳಿಗೆ ಉತ್ತಮ ದೈಹಿಕ ಸಾಮರ್ಥ್ಯ ಲಭಿಸಬೇಕಾದರೆ ದೇವರ ಮತ್ತು ತಂದೆ ತಾಯಿಗಳ ಆಶೀರ್ವಾದ ಅಗತ್ಯ ಎಂದು ತಿಳಿಸಿದರು. ಶಿಸ್ತಿನಿಂದ ಜೀವನ ನಡೆಸುತ್ತಾ ಗುರುಗಳ ಬಗ್ಗೆ ಗೌರವದಿಂದ ಇರಬೇಕೆಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಶ್ರೀಮತಿ ವಿಶಾಲಾಕ್ಷಿ ಧನ್ಯವಾದವಿತ್ತರು. ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!