23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್. ಪಿ ಪೀತಾಂಬರ ಹೇರಾಜೇಯವರು ತಿಳಿಸಿದರು. ಮುಂದುವರಿಯುತ್ತಾ ಕ್ರೀಡಾಪಟುಗಳಿಗೆ ಉತ್ತಮ ದೈಹಿಕ ಸಾಮರ್ಥ್ಯ ಲಭಿಸಬೇಕಾದರೆ ದೇವರ ಮತ್ತು ತಂದೆ ತಾಯಿಗಳ ಆಶೀರ್ವಾದ ಅಗತ್ಯ ಎಂದು ತಿಳಿಸಿದರು. ಶಿಸ್ತಿನಿಂದ ಜೀವನ ನಡೆಸುತ್ತಾ ಗುರುಗಳ ಬಗ್ಗೆ ಗೌರವದಿಂದ ಇರಬೇಕೆಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಶ್ರೀಮತಿ ವಿಶಾಲಾಕ್ಷಿ ಧನ್ಯವಾದವಿತ್ತರು. ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಕಾಮರ್ಸ್ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಭಾರಿ ರಿಯಾಯಿತಿ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!