ಪ್ರಮುಖ ಸುದ್ದಿ

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

ಬೆಳ್ತಂಗಡಿ : ಇತ್ತೀಚೆಗೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ನಯರಾ ಪೆಟ್ರೋಲ್ ಪಂಪ್ ಬಳಿ ಅದೇ ಊರಿನ ಮಹಿಳೆ ಪದ್ಮಾವತಿ ಎಂಬವರ ಒಂದು ಲಕ್ಷ ರೂಪಾಯಿ ಹಣ ಹಾಗೂ ಅನೇಕ ಅಗತ್ಯ ದಾಖಲೆಗಳಿದ್ದ ಬ್ಯಾಗ್ ಬೆಳ್ತಂಗಡಿ ತಾಲೂಕು ಗರ್ಡಾಡಿ ಯುವಕ ವರುಣ್ ಎಂಬವರು ಸಿದ್ದಕ್ಕಟೆ ಬಳಿ ಪ್ರಯಾಣಿಸುವಾಗ ಸಿಕ್ಕಿರುವ ಬಗ್ಗೆ ವರದಿಯಾಗಿದೆ.
ಕೂಡಲೇ ಕಾರ್ಯಪ್ರವೃತರಾಗಿ ಬ್ಯಾಗ್ ನಲ್ಲಿದ್ದ ದಾಖಲೆ ಪರಿಶೀಲಿಸಿ ತಕ್ಷಣವೇ ದೂರವಾಣಿ ಮೂಲಕ ಸಂಪರ್ಕ ಮಾಡಿ ಬ್ಯಾಗ್ ಕಳೆದುಕೊಂಡ ಮಹಿಳೆಗೆ ದಾಖಲೆ,ಹಣದ ಜೊತೆಗೆ ಬ್ಯಾಗ್ ಹಿಂತಿರುಗಿಸಿ ವರುಣ್ ರವರು ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಸಲುವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವಮೋರ್ಚಾದ ವತಿಯಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತರಾಗಿದ್ದಾರೆ ವರುಣ್.
ಬೆಳ್ತಂಗಡಿ ಶಾಸಕ ಹರೀಶ್ ಪೂoಜ ರವರು ಈ ಮಹಾನ್ ಕಾರ್ಯಕ್ಕೆ ವರುಣ್ ಅವರಿಗೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ.

Related posts

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!