24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಶುಕ್ರವಾರ ಮತ್ತು ಅ.5 ಶನಿವಾರ ಬೆಳಿಗ್ಗೆ 9.೦೦ರಿಂದ ಸಂಜೆ 5.೦೦ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!