24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

ಉಜಿರೆ: ಗ್ರಾಮಸ್ವರಾಜ್ಯ ಹಾಗೂ ರಾಮ ರಾಜ್ಯದ ಕನಸು ಕಂಡ ಗಾಂಧೀಜಿಯವರು ಯುವಕರಲ್ಲಿ ಸೇವಾ ಮನೋಭಾವನೆ ಮೊದಲು ಬೆಳೆಯಬೇಕು ಎಂದು ಮನ ಮಾಡಿದರು. ಮುಂದೆ ಇವರ ಜನ್ಮ ಶತಾಬ್ದಿಯ ಸಂದರ್ಭದಲ್ಲಿ ಪ್ರಾರಂಭಗೊಂಡದ್ದೆ ಈ ರಾಷ್ಟ್ರೀಯ ಸೇವಾ ಯೋಜನೆ. ವ್ಯಕ್ತಿತ್ವ ವಿಕಸನ, ಶಿಸ್ತು, ಸಮಯಪಾಲನೆ, ಸಹಬಾಳ್ವೆ ಇತ್ಯಾದಿಗಳನ್ನು ಕಲಿತುಕೊಳ್ಳಲು ಇದು ಉತ್ತಮ ವೇದಿಕೆಯಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರದ ಡೀನ್ ಪ್ರೊ. ವಿಶ್ವನಾಥ ಪಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯ ಅಂಗವಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಗೊತ್ತು ಗುರಿ ಇಲ್ಲದ ಯುವ ಜನತೆಗೆ ಸರಿಯಾದ ಮಾರ್ಗದರ್ಶನ ನೀಡಲು ಇರುವ ಯೋಜನೆಯೇ ಈ ರಾಷ್ಟ್ರೀಯ ಸೇವಾ ಯೋಜನೆಯಾಗಿದೆ ಗ್ರಾಮೀಣ ಜೀವನದ ಪರಿಚಯವಾಗಬೇಕಾದರೆ ಇಂತಹ ಪ್ರಕಲ್ಪಗಳಲ್ಲಿ ಯುವಕರು ತೊಡಗಿಸಿ ಕೊಳ್ಳಬೇಕೆಂದು ಕರೆ ನೀಡಿದರು.

ಪ್ರಾಪ್ತಿ ಅವರು ರಾಷ್ಟ್ರೀಯ ಸೇವಾ ಯೋಜನೆಯ ಪರಿಚಯಾತ್ಮಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ನೂತನವಾದ ಸೂಚನಾ ಫಲಕವನ್ನು ಅನಾವರಣಗೊಳಿಸಲಾಯಿತು ಹಾಗೂ ರಾಷ್ಟ್ರೀಯ ಭಾವೈಕ್ಯತೆ ಶಿಬಿರದಲ್ಲಿ ಪಾಲ್ಗೊಂಡ ಸ್ವಯಂಸೇವಕಿ ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು.

ರಾ.ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಘಟಕದ ನಾಯಕರಾದ ಆದಿತ್ಯ ವಿ. , ಪ್ರಾಪ್ತಿ ಗೌಡ ಉಪಸ್ಥಿತರಿದ್ದರು.

ಆದಿ ಸ್ವಾಗತಿಸಿ , ಯಕ್ಷಿತ್ ವಂದಿಸಿದರು. ಕಾರ್ಯದರ್ಶಿ ಐಶ್ವರ್ಯ ನಿರೂಪಿಸಿದರು. ಸ್ವಯಂ ಸೇವಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya
error: Content is protected !!