April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್. ಪಿ ಪೀತಾಂಬರ ಹೇರಾಜೇಯವರು ತಿಳಿಸಿದರು. ಮುಂದುವರಿಯುತ್ತಾ ಕ್ರೀಡಾಪಟುಗಳಿಗೆ ಉತ್ತಮ ದೈಹಿಕ ಸಾಮರ್ಥ್ಯ ಲಭಿಸಬೇಕಾದರೆ ದೇವರ ಮತ್ತು ತಂದೆ ತಾಯಿಗಳ ಆಶೀರ್ವಾದ ಅಗತ್ಯ ಎಂದು ತಿಳಿಸಿದರು. ಶಿಸ್ತಿನಿಂದ ಜೀವನ ನಡೆಸುತ್ತಾ ಗುರುಗಳ ಬಗ್ಗೆ ಗೌರವದಿಂದ ಇರಬೇಕೆಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಶ್ರೀಮತಿ ವಿಶಾಲಾಕ್ಷಿ ಧನ್ಯವಾದವಿತ್ತರು. ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಆಟಿ ಸೇಲ್, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya
error: Content is protected !!