22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್. ಪಿ ಪೀತಾಂಬರ ಹೇರಾಜೇಯವರು ತಿಳಿಸಿದರು. ಮುಂದುವರಿಯುತ್ತಾ ಕ್ರೀಡಾಪಟುಗಳಿಗೆ ಉತ್ತಮ ದೈಹಿಕ ಸಾಮರ್ಥ್ಯ ಲಭಿಸಬೇಕಾದರೆ ದೇವರ ಮತ್ತು ತಂದೆ ತಾಯಿಗಳ ಆಶೀರ್ವಾದ ಅಗತ್ಯ ಎಂದು ತಿಳಿಸಿದರು. ಶಿಸ್ತಿನಿಂದ ಜೀವನ ನಡೆಸುತ್ತಾ ಗುರುಗಳ ಬಗ್ಗೆ ಗೌರವದಿಂದ ಇರಬೇಕೆಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಶ್ರೀಮತಿ ವಿಶಾಲಾಕ್ಷಿ ಧನ್ಯವಾದವಿತ್ತರು. ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ನೂಜೋಡಿ ಮನೆಗೆ ಕಾಂಗ್ರೇಸ್ ಮುಖಂಡ ಪದ್ಮರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!