ಪ್ರಮುಖ ಸುದ್ದಿ

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

ಬೆಳ್ತಂಗಡಿ : ಇತ್ತೀಚೆಗೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ನಯರಾ ಪೆಟ್ರೋಲ್ ಪಂಪ್ ಬಳಿ ಅದೇ ಊರಿನ ಮಹಿಳೆ ಪದ್ಮಾವತಿ ಎಂಬವರ ಒಂದು ಲಕ್ಷ ರೂಪಾಯಿ ಹಣ ಹಾಗೂ ಅನೇಕ ಅಗತ್ಯ ದಾಖಲೆಗಳಿದ್ದ ಬ್ಯಾಗ್ ಬೆಳ್ತಂಗಡಿ ತಾಲೂಕು ಗರ್ಡಾಡಿ ಯುವಕ ವರುಣ್ ಎಂಬವರು ಸಿದ್ದಕ್ಕಟೆ ಬಳಿ ಪ್ರಯಾಣಿಸುವಾಗ ಸಿಕ್ಕಿರುವ ಬಗ್ಗೆ ವರದಿಯಾಗಿದೆ.
ಕೂಡಲೇ ಕಾರ್ಯಪ್ರವೃತರಾಗಿ ಬ್ಯಾಗ್ ನಲ್ಲಿದ್ದ ದಾಖಲೆ ಪರಿಶೀಲಿಸಿ ತಕ್ಷಣವೇ ದೂರವಾಣಿ ಮೂಲಕ ಸಂಪರ್ಕ ಮಾಡಿ ಬ್ಯಾಗ್ ಕಳೆದುಕೊಂಡ ಮಹಿಳೆಗೆ ದಾಖಲೆ,ಹಣದ ಜೊತೆಗೆ ಬ್ಯಾಗ್ ಹಿಂತಿರುಗಿಸಿ ವರುಣ್ ರವರು ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಸಲುವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವಮೋರ್ಚಾದ ವತಿಯಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತರಾಗಿದ್ದಾರೆ ವರುಣ್.
ಬೆಳ್ತಂಗಡಿ ಶಾಸಕ ಹರೀಶ್ ಪೂoಜ ರವರು ಈ ಮಹಾನ್ ಕಾರ್ಯಕ್ಕೆ ವರುಣ್ ಅವರಿಗೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ.

Related posts

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!