26.2 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿ

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

ಬೆಳ್ತಂಗಡಿ : ಇತ್ತೀಚೆಗೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ನಯರಾ ಪೆಟ್ರೋಲ್ ಪಂಪ್ ಬಳಿ ಅದೇ ಊರಿನ ಮಹಿಳೆ ಪದ್ಮಾವತಿ ಎಂಬವರ ಒಂದು ಲಕ್ಷ ರೂಪಾಯಿ ಹಣ ಹಾಗೂ ಅನೇಕ ಅಗತ್ಯ ದಾಖಲೆಗಳಿದ್ದ ಬ್ಯಾಗ್ ಬೆಳ್ತಂಗಡಿ ತಾಲೂಕು ಗರ್ಡಾಡಿ ಯುವಕ ವರುಣ್ ಎಂಬವರು ಸಿದ್ದಕ್ಕಟೆ ಬಳಿ ಪ್ರಯಾಣಿಸುವಾಗ ಸಿಕ್ಕಿರುವ ಬಗ್ಗೆ ವರದಿಯಾಗಿದೆ.
ಕೂಡಲೇ ಕಾರ್ಯಪ್ರವೃತರಾಗಿ ಬ್ಯಾಗ್ ನಲ್ಲಿದ್ದ ದಾಖಲೆ ಪರಿಶೀಲಿಸಿ ತಕ್ಷಣವೇ ದೂರವಾಣಿ ಮೂಲಕ ಸಂಪರ್ಕ ಮಾಡಿ ಬ್ಯಾಗ್ ಕಳೆದುಕೊಂಡ ಮಹಿಳೆಗೆ ದಾಖಲೆ,ಹಣದ ಜೊತೆಗೆ ಬ್ಯಾಗ್ ಹಿಂತಿರುಗಿಸಿ ವರುಣ್ ರವರು ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಸಲುವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವಮೋರ್ಚಾದ ವತಿಯಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತರಾಗಿದ್ದಾರೆ ವರುಣ್.
ಬೆಳ್ತಂಗಡಿ ಶಾಸಕ ಹರೀಶ್ ಪೂoಜ ರವರು ಈ ಮಹಾನ್ ಕಾರ್ಯಕ್ಕೆ ವರುಣ್ ಅವರಿಗೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!