22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಶುಕ್ರವಾರ ಮತ್ತು ಅ.5 ಶನಿವಾರ ಬೆಳಿಗ್ಗೆ 9.೦೦ರಿಂದ ಸಂಜೆ 5.೦೦ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya
error: Content is protected !!