September 6, 2026
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಶುಕ್ರವಾರ ಮತ್ತು ಅ.5 ಶನಿವಾರ ಬೆಳಿಗ್ಗೆ 9.೦೦ರಿಂದ ಸಂಜೆ 5.೦೦ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಮಿತ್ತಬಾಗಿಲು ಗ್ರಾಮದ ಕೊಪ್ಪ ಬಾಳಪ್ಪ ಕುಂಬಾರರ ಮನೆಯ ಮೇಲ್ಚಾವಣಿ ಕುಸಿತ :ದುರಸ್ತಿಯ ವೆಚ್ಚ ಭರಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

– ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ- ಕಾಲಮಿತಿಯೊಳಗೆಕಾಲಮಿತಿಯೊಳಗೆ ಸಮಸ್ಯೆಗಳನ್ನು ಪರಿಹರಿಸಲು ವಿಫಲರಾದರೆ ಸರ್ಕಾರದ ಗಮನಕ್ಕೆ ತರುತ್ತೇನೆ : ರಾಜ್ಯ ಪರಿಶಿಷ್ಟ ಜಾತಿ/ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಎಚ್ಚರಿಕೆ

Suddi Udaya
error: Content is protected !!