25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ನಿರ್ದೇಶನದಂತೆ ಅ.4 ಶುಕ್ರವಾರ ಮತ್ತು ಅ.5 ಶನಿವಾರ ಬೆಳಿಗ್ಗೆ 9.೦೦ರಿಂದ ಸಂಜೆ 5.೦೦ರವರೆಗೆ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ ನಡೆಯಲಿದೆ.

ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್, ಧಾರವಾಡದ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆಯ ವಾಕ್ ಮತ್ತು ಶ್ರವಣ ತಜ್ಞರಾದ ಡಾ| ವಸೀಮ್ ಇವರಿಂದ ಎಲ್ಲಾ ವಯಸ್ಸಿನ ಜನರಿಗೆ ಮಾತು, ಭಾಷೆ ಮತ್ತು ಶ್ರವಣ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು.

ಈ ಶಿಬಿರದಲ್ಲಿ ಭಾರತ ಸರಕಾರದ ಎ.ಡಿ.ಐ.ಪಿ ಯೋಜನೆಯಡಿ ಶ್ರವಣ ಉಪಕರಣಗಳನ್ನು ಪಡೆಯಲು ಅಗತ್ಯವಿರುವ ದಾಖಲೆಗಳ ಕುರಿತು ಮರ್ಗದರ್ಶನ ನೀಡಲಾಗುವುದು. ಮಾಹಿತಿಗಾಗಿ 7760397878 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!