April 2, 2025
ಆರೋಗ್ಯತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್ ಆರ್ ಶೆಟ್ಟಿ ಇವರ ತಂಡ ಶಸ್ತ್ರಚಿಕಿತ್ಸೆ ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗು ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತದೆ.


ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳು ಕೂಡ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ನಗರದ ಹೈಟೆಕ್ ಆಸ್ಪತ್ರೆಗಳಲ್ಲಿ ದುಬಾರಿಯಾಗಿರುವ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
error: Content is protected !!