September 6, 2026
ಆರೋಗ್ಯತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್ ಆರ್ ಶೆಟ್ಟಿ ಇವರ ತಂಡ ಶಸ್ತ್ರಚಿಕಿತ್ಸೆ ನಡೆಸಿದರು. ಶಸ್ತ್ರಚಿಕಿತ್ಸೆಗೆ ಒಳಗಾದ ಮಗು ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡಿದ್ದು, ಡಿಸ್ಚಾರ್ಜ್ ಆಗಿರುತ್ತದೆ.


ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ತುಂಬಾ ಕಡಿಮೆ ಇರುತ್ತದೆ. ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳು ಕೂಡ ಉಜಿರೆಯ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಸಲಾಗುತ್ತಿದೆ. ನಗರದ ಹೈಟೆಕ್ ಆಸ್ಪತ್ರೆಗಳಲ್ಲಿ ದುಬಾರಿಯಾಗಿರುವ ಶಸ್ತ್ರಚಿಕಿತ್ಸೆಗಳನ್ನು ಇಲ್ಲಿ ಅತ್ಯಂತ ಕಡಿಮೆ ದರದಲ್ಲಿ ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya
error: Content is protected !!