22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಗೋಪಕುಮಾರ್ ಹೇಳಿದರು.


ಅವರು ಸೆ.24 ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರ ಆಯೋಜಿಸಿದ “ಪೀಸ್” ವಿದ್ಯಾರ್ಥಿಸಂಘ ಉದ್ಘಾಟಿಸಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಸಂಘದ ಮೂಲಕ ಶಾಂತಿ ಕಾಪಾಡುವ ಕಾರ್ಯಗಳು ನಿರಂತರ ನಡೆಯಲಿ ಎಂದು ಆಶಿಸಿದರು.


ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್, ಕಾರ್ಯಕ್ರಮದ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ. ಮಹೇಶ್‌ಬಾಬು, ಅಶ್ವಿನಿ ಎಚ್. ಸಿಂಧು ವಿ., ಸಂಘದ ಅಧ್ಯಕ್ಷರಾದ ಅಲಿಷ ಪಿ. ಜಾಯ್ ಉಪಸ್ಥಿತರಿದ್ದರು.


ಕಾರ್ಯದರ್ಶಿ ಕುಮಾರಿ ಚೈತನ್ಯ ಸ್ವಾಗತಿಸಿದರು. ಕುಮಾರಿ ಕೀರ್ತನಾ ಧನ್ಯವಾದವಿತ್ತರು. ಕುಮಾರಿ ಸ್ಟಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವಿನೂತನ ‘ಸಿರಿ ಮಿಲ್ಲೆಟ್ ಕೆಫೆ’ ಧಾರವಾಡದಲ್ಲಿ ಶುಭಾರಂಭ

Suddi Udaya

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

Suddi Udaya
error: Content is protected !!