September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಪ್ರಾಧ್ಯಾಪಕಿ ಕೃಷ್ಣಗೋಪಕುಮಾರ್ ಹೇಳಿದರು.


ಅವರು ಸೆ.24 ರಂದು ಉಜಿರೆಯಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸ್ನಾತಕೋತ್ತರ ಹಾಗೂ ಮನೋವಿಜ್ಞಾನ ಸಂಶೋಧನಾ ಕೇಂದ್ರ ಆಯೋಜಿಸಿದ “ಪೀಸ್” ವಿದ್ಯಾರ್ಥಿಸಂಘ ಉದ್ಘಾಟಿಸಿ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಕುಮಾರ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ನೂತನ ಸಂಘದ ಮೂಲಕ ಶಾಂತಿ ಕಾಪಾಡುವ ಕಾರ್ಯಗಳು ನಿರಂತರ ನಡೆಯಲಿ ಎಂದು ಆಶಿಸಿದರು.


ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್, ಕಾರ್ಯಕ್ರಮದ ಸಂಯೋಜಕಿ ಅಶ್ವಿನಿ ಶೆಟ್ಟಿ, ಡಾ. ಮಹೇಶ್‌ಬಾಬು, ಅಶ್ವಿನಿ ಎಚ್. ಸಿಂಧು ವಿ., ಸಂಘದ ಅಧ್ಯಕ್ಷರಾದ ಅಲಿಷ ಪಿ. ಜಾಯ್ ಉಪಸ್ಥಿತರಿದ್ದರು.


ಕಾರ್ಯದರ್ಶಿ ಕುಮಾರಿ ಚೈತನ್ಯ ಸ್ವಾಗತಿಸಿದರು. ಕುಮಾರಿ ಕೀರ್ತನಾ ಧನ್ಯವಾದವಿತ್ತರು. ಕುಮಾರಿ ಸ್ಟಿನ್ಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!