23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ನಿವಾರಿಸಬೇಕಾದರೆ ಕ್ರೀಡೆ ಅತ್ಯಂತ ಅವಶ್ಯಕತೆ ಎಂದು ಹಿರಿಯ ವಿದ್ಯಾರ್ಥಿ, ನಿವೃತ್ತ ಎಸ್. ಪಿ ಪೀತಾಂಬರ ಹೇರಾಜೇಯವರು ತಿಳಿಸಿದರು. ಮುಂದುವರಿಯುತ್ತಾ ಕ್ರೀಡಾಪಟುಗಳಿಗೆ ಉತ್ತಮ ದೈಹಿಕ ಸಾಮರ್ಥ್ಯ ಲಭಿಸಬೇಕಾದರೆ ದೇವರ ಮತ್ತು ತಂದೆ ತಾಯಿಗಳ ಆಶೀರ್ವಾದ ಅಗತ್ಯ ಎಂದು ತಿಳಿಸಿದರು. ಶಿಸ್ತಿನಿಂದ ಜೀವನ ನಡೆಸುತ್ತಾ ಗುರುಗಳ ಬಗ್ಗೆ ಗೌರವದಿಂದ ಇರಬೇಕೆಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ ಜೈನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೊನಾಲ್ಡ್ ಲೋಬೊ, ತ್ರೀವಿಕ್ರಂ ಹೆಬ್ಬಾರ್, ಪದ್ಮ ಕುಮಾರ್ ಆಗಮಿಸಿದ್ದು, ಬೆಳ್ತಂಗಡಿ ತಾಲೂಕಿನ ಏಳು ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಗಣಿತ ಶಾಸ್ತ್ರ ಉಪನ್ಯಾಸಕ ಮೋಹನ ಭಟ್ ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಶ್ರೀಮತಿ ವಿಶಾಲಾಕ್ಷಿ ಧನ್ಯವಾದವಿತ್ತರು. ಡಾ. ರಾಮಚಂದ್ರ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya
error: Content is protected !!