July 23, 2026
ಪ್ರಮುಖ ಸುದ್ದಿ

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

ಬೆಳ್ತಂಗಡಿ : ಇತ್ತೀಚೆಗೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ನಯರಾ ಪೆಟ್ರೋಲ್ ಪಂಪ್ ಬಳಿ ಅದೇ ಊರಿನ ಮಹಿಳೆ ಪದ್ಮಾವತಿ ಎಂಬವರ ಒಂದು ಲಕ್ಷ ರೂಪಾಯಿ ಹಣ ಹಾಗೂ ಅನೇಕ ಅಗತ್ಯ ದಾಖಲೆಗಳಿದ್ದ ಬ್ಯಾಗ್ ಬೆಳ್ತಂಗಡಿ ತಾಲೂಕು ಗರ್ಡಾಡಿ ಯುವಕ ವರುಣ್ ಎಂಬವರು ಸಿದ್ದಕ್ಕಟೆ ಬಳಿ ಪ್ರಯಾಣಿಸುವಾಗ ಸಿಕ್ಕಿರುವ ಬಗ್ಗೆ ವರದಿಯಾಗಿದೆ.
ಕೂಡಲೇ ಕಾರ್ಯಪ್ರವೃತರಾಗಿ ಬ್ಯಾಗ್ ನಲ್ಲಿದ್ದ ದಾಖಲೆ ಪರಿಶೀಲಿಸಿ ತಕ್ಷಣವೇ ದೂರವಾಣಿ ಮೂಲಕ ಸಂಪರ್ಕ ಮಾಡಿ ಬ್ಯಾಗ್ ಕಳೆದುಕೊಂಡ ಮಹಿಳೆಗೆ ದಾಖಲೆ,ಹಣದ ಜೊತೆಗೆ ಬ್ಯಾಗ್ ಹಿಂತಿರುಗಿಸಿ ವರುಣ್ ರವರು ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಸಲುವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವಮೋರ್ಚಾದ ವತಿಯಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತರಾಗಿದ್ದಾರೆ ವರುಣ್.
ಬೆಳ್ತಂಗಡಿ ಶಾಸಕ ಹರೀಶ್ ಪೂoಜ ರವರು ಈ ಮಹಾನ್ ಕಾರ್ಯಕ್ಕೆ ವರುಣ್ ಅವರಿಗೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!