23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

ಬೆಳ್ತಂಗಡಿ : ಇತ್ತೀಚೆಗೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ನಯರಾ ಪೆಟ್ರೋಲ್ ಪಂಪ್ ಬಳಿ ಅದೇ ಊರಿನ ಮಹಿಳೆ ಪದ್ಮಾವತಿ ಎಂಬವರ ಒಂದು ಲಕ್ಷ ರೂಪಾಯಿ ಹಣ ಹಾಗೂ ಅನೇಕ ಅಗತ್ಯ ದಾಖಲೆಗಳಿದ್ದ ಬ್ಯಾಗ್ ಬೆಳ್ತಂಗಡಿ ತಾಲೂಕು ಗರ್ಡಾಡಿ ಯುವಕ ವರುಣ್ ಎಂಬವರು ಸಿದ್ದಕ್ಕಟೆ ಬಳಿ ಪ್ರಯಾಣಿಸುವಾಗ ಸಿಕ್ಕಿರುವ ಬಗ್ಗೆ ವರದಿಯಾಗಿದೆ.
ಕೂಡಲೇ ಕಾರ್ಯಪ್ರವೃತರಾಗಿ ಬ್ಯಾಗ್ ನಲ್ಲಿದ್ದ ದಾಖಲೆ ಪರಿಶೀಲಿಸಿ ತಕ್ಷಣವೇ ದೂರವಾಣಿ ಮೂಲಕ ಸಂಪರ್ಕ ಮಾಡಿ ಬ್ಯಾಗ್ ಕಳೆದುಕೊಂಡ ಮಹಿಳೆಗೆ ದಾಖಲೆ,ಹಣದ ಜೊತೆಗೆ ಬ್ಯಾಗ್ ಹಿಂತಿರುಗಿಸಿ ವರುಣ್ ರವರು ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಸಲುವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವಮೋರ್ಚಾದ ವತಿಯಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತರಾಗಿದ್ದಾರೆ ವರುಣ್.
ಬೆಳ್ತಂಗಡಿ ಶಾಸಕ ಹರೀಶ್ ಪೂoಜ ರವರು ಈ ಮಹಾನ್ ಕಾರ್ಯಕ್ಕೆ ವರುಣ್ ಅವರಿಗೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ.

Related posts

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya
error: Content is protected !!