ಪ್ರಮುಖ ಸುದ್ದಿ

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

ಬೆಳ್ತಂಗಡಿ : ಇತ್ತೀಚೆಗೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ನಯರಾ ಪೆಟ್ರೋಲ್ ಪಂಪ್ ಬಳಿ ಅದೇ ಊರಿನ ಮಹಿಳೆ ಪದ್ಮಾವತಿ ಎಂಬವರ ಒಂದು ಲಕ್ಷ ರೂಪಾಯಿ ಹಣ ಹಾಗೂ ಅನೇಕ ಅಗತ್ಯ ದಾಖಲೆಗಳಿದ್ದ ಬ್ಯಾಗ್ ಬೆಳ್ತಂಗಡಿ ತಾಲೂಕು ಗರ್ಡಾಡಿ ಯುವಕ ವರುಣ್ ಎಂಬವರು ಸಿದ್ದಕ್ಕಟೆ ಬಳಿ ಪ್ರಯಾಣಿಸುವಾಗ ಸಿಕ್ಕಿರುವ ಬಗ್ಗೆ ವರದಿಯಾಗಿದೆ.
ಕೂಡಲೇ ಕಾರ್ಯಪ್ರವೃತರಾಗಿ ಬ್ಯಾಗ್ ನಲ್ಲಿದ್ದ ದಾಖಲೆ ಪರಿಶೀಲಿಸಿ ತಕ್ಷಣವೇ ದೂರವಾಣಿ ಮೂಲಕ ಸಂಪರ್ಕ ಮಾಡಿ ಬ್ಯಾಗ್ ಕಳೆದುಕೊಂಡ ಮಹಿಳೆಗೆ ದಾಖಲೆ,ಹಣದ ಜೊತೆಗೆ ಬ್ಯಾಗ್ ಹಿಂತಿರುಗಿಸಿ ವರುಣ್ ರವರು ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ ಹುಟ್ಟುಹಬ್ಬದ ಸಲುವಾಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವಮೋರ್ಚಾದ ವತಿಯಿಂದ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲೂ ನಿರತರಾಗಿದ್ದಾರೆ ವರುಣ್.
ಬೆಳ್ತಂಗಡಿ ಶಾಸಕ ಹರೀಶ್ ಪೂoಜ ರವರು ಈ ಮಹಾನ್ ಕಾರ್ಯಕ್ಕೆ ವರುಣ್ ಅವರಿಗೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಂದಲೂ ಪ್ರಶಂಸೆ ವ್ಯಕ್ತವಾಗುತ್ತಿದೆ.

Related posts

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಪ್ರಸನ್ನ ಕಾಲೇಜ್ ಕ್ಯಾಂಪಸ್‌ನಲ್ಲಿ ಹೋಟೆಲ್ ಸಮಡೈನ್ ಶುಭಾರಂಭ ; ಮಾಜಿ ಸಚಿವ ಗಂಗಾಧರ ಗೌಡರಿಂದ ಉದ್ಘಾಟನೆ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya
error: Content is protected !!