24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

ಪುತ್ತೂರು ನಗರದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬೀದಿಯಲ್ಲಿ ತಿರುಗಾಡುತ್ತಾ, ಸಾರ್ವಜನಿಕರಿಗೆ ತೊಂದರೆಯನ್ನು ಕೊಡುತ್ತಿದ್ದ ಸುಮಾರು 26ವರ್ಷ ಪ್ರಾಯದ ಸಂದೀಪ್ ಪರಹೈ ಎಂಬಾತನನ್ನು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಎಎಸ್ಐ ಪುಟ್ಟಸ್ವಾಮಪ್ಪ ಮತ್ತು ಪೋಲಿಸ್ ನಾಗೇಂದ್ರರವರು ಚಿಕಿತ್ಸೆಯ ನಿಮಿತ್ತ ಸಿಯೋನ್ ಮಾನಸಿಕ ಆರೋಗ್ಯ ಮತ್ತು ಪುನರ್ವಸತಿ ಕೇಂದ್ರಕ್ಕೆ ಜು.15. ರಂದು ಕರೆತಂದು ದಾಖಲು ಮಾಡಿಕೊಳ್ಳಲಾಯಿತು. ಆಶ್ರಮಕ್ಕೆ ದಾಖಲಾಗುವಾಗ ಅವರ ಮಾನಸಿಕ ಸ್ಥಿತಿಯು ತುಂಬಾ ಹದಗೆಟ್ಟಿತ್ತು, ದೈಹಿಕವಾಗಿಯೂ ಕ್ಷೀಣಿಸಿದ್ದರು. ಸದ್ರಿ ವ್ಯಕ್ತಿಗೆ ಅವರ ಯಾವುದೇ ಮಾಹಿತಿಯ ಅರಿವಿರಲಿಲ್ಲ. ಸಿಯೋನ್ ಆಶ್ರಮದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ಮತ್ತು ನಿರಂತರ ಸಮಾಲೋಚನೆಯನ್ನು ನೀಡಲಾಯಿತು. ಸಿಯೋನ್ ಆಶ್ರಮದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯಲ್ಲಿ ಹಾಗೂ ಮನರಂಜನಾ ಕಾರ್ಯಕ್ರಮದಲ್ಲಿ ತೊಡಗಿಸಿ, ಅವರು ದೈಹಿಕವಾಗಿಯೂ, ಮಾನಸಿಕವಾಗಿಯೂ ಶೀಘ್ರದಲ್ಲಿ ಚೇತರಿಸಿಕೊಂಡರು.

ಸಿಯೋನ್ ಆಶ್ರಮದಲ್ಲಿ ಮನೋವೈದ್ಯರ ಸೂಕ್ತ ಚಿಕಿತ್ಸೆ ಮತ್ತು ನಿರಂತರ ಸಮಾಲೋಚನೆಯ ಫಲವಾಗಿ ಅವರ ಊರು ಜಾರ್ಖಂಡ್ ರಾಜ್ಯದ ಲತೇಹಾರ್ ಜಿಲ್ಲೆಯ ಚಿಪಡೋಹರ್ ಮತ್ತು ತಂದೆ ನನಕು ಪರಹೈ ಹಾಗೂ ಅವರ ದೂರವಾಣಿ ಸಂಖ್ಯೆ ತಿಳಿಸಿದ್ದು, ಆ ಪ್ರಕಾರ ಸಂದೀಪ್ ರವರ ತಂದೆಯಾದ ನನಕು ಪರಹೈರವರಿಗೆ ಸಿಯೋನ್ ಆಶ್ರಮದ ಮನೋವೈದ್ಯರಾದ ಡಾ.ಅನಿಲ್ ಕಾಕುಂಜೆಯವರು ದೂರವಾಣಿ ಮೂಲಕ ಸಂಪರ್ಕಿಸಿ, ಅವರ ಮಾನಸಿಕ ರೋಗದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದ ಕುಟುಂಬಕ್ಕೆ ಮರುಭೂಮಿಯಲ್ಲಿ ಓಯಸಿಸ್ ಸಿಕ್ಕಷ್ಟು ಸಂತೋಷವಾಯಿತು. ತಕ್ಷಣವೇ ಸಿಯೋನ್ ಆಶ್ರಮಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು.


ಸೆ.26 ರಂದು ಸಿಯೋನ್ ಆಶ್ರಮಕ್ಕೆ ಭೇಟಿ ನೀಡಿ ತಮ್ಮ ಮಗನಾದ ಸಂದೀಪ್ ಇಲ್ಲಿ ಸುರಕ್ಷಿತ ಹಾಗೂ ಖುಷಿಯಾಗಿರುವುದನ್ನು ಕಂಡು ಭಾವುಕರಾದರು. ಸಂದೀಪ್ ನ ಮುಂದಿನ ಚಿಕಿತ್ಸಾ ಕ್ರಮಗಳ ಬಗ್ಗೆ ಇವನ ಮನೆಯವರಿಗೆ ಮಾಹಿತಿಯನ್ನು ನೀಡಿ, ಈತನನ್ನು ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ರವರು ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಸಂಸ್ಥೆಯ ಆಡಳಿತ ಮಂಡಳಿಯವರು, ಆಶ್ರಮದ ಸಿಬ್ಬಂದಿವರ್ಗದವರು, ಆಶ್ರಮದ ನಿವಾಸಿಗಳು ಇವರಿಗೆ ಶುಭ ಹಾರೈಸಿ, ಮನೆಗೆ ಸಂತೋಷದಿಂದ ಕಳುಹಿಸಿಕೊಟ್ಟರು. ಹಾಗೆಯೇ ತನ್ನ ಕುಟುಂಬವನ್ನು ಹಲವು ವರ್ಷಗಳ ನಂತರ ಕಂಡ ಸಂದೀಪ್ ಹರ್ಷಗೊಂಡು ಕುಟುಂಬದವರೊಂದಿಗೆ ತುಂಬಾ ಸಂತೋ ಷದಿಂದ ಮನೆಗೆ ತೆರಳಿದರು.

Related posts

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya
error: Content is protected !!