July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಸಂಗೀತ-ವೃತ್ತಿ- ವ್ಯಕ್ತಿತ್ವ ಎಂಬ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾ ಸೌರಭ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ವಿದ್ವಾನ್ ದತ್ತಾತ್ರಿ ಇವರು ಮಾತನಾಡಿ ಸಂಗೀತ ಎಂಬುದು ಕಬ್ಬಿಣದ ಕಡಲೆಯಲ್ಲ ಮನಸ್ಸಿಗೆ ಸಂತೋಷ ಹಾಗೂ ಆತ್ಮಕ್ಕೆ ಸಮಾಧಾನ ನೀಡುವ ಸಾಧನ. ಸಂಗೀತ ಕಲಿತರೆ ಸಾಕು ನಾವು ದೇವರಿಗೆ ಸಮೀಪಿಸುತ್ತೇವೆ, ಸಂಗೀತ ಎನ್ನುವುದು ಜೀವನವನ್ನು ಕೊಡುತ್ತದೆ, ಮನುಷ್ಯನ ನೋವು ನಲಿವಿನಲ್ಲಿ ಜೊತೆಯಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮತ್ತೋರ್ವ ಅತಿಥಿಗಳಾದ ಡಾ. ರಾಜೇಶ್ ನಾಯಕ್, ಅಧ್ಯಕ್ಷರು, ರಾಜಶ್ರೀ ಜೀವನ ಕೌಶಲ ತರಬೇತಿ ಕೇಂದ್ರ, ಬೆಂಗಳೂರು ಇವರು ಮಾತನಾಡಿ ನಮ್ಮ ಜ್ಞಾನ ನಾವೆಷ್ಟು ಕಲಿಸುತ್ತೇವೆ ಅದರ ಮೇಲೆ ಅವಲಂಬಿತವಾಗಿದೆ. ಸಂಗೀತವು ಒತ್ತಡ ನಿವಾರಣೆಯಲ್ಲಿ ಸಹಕರಿಸುತ್ತದೆ. ಜೀವನದ ದಾರಿಯನ್ನು ಸುಗಮಗೊಳಿಸುತ್ತದೆ. ನಾವು ಕಲಿಸಲು ಆರಂಭಿಸಿದ ಮೇಲೆ ನಾವು ಕಲಿಯುತ್ತೇವೆ ಎಂದರು.


ನಮ್ಮದು ಗುರುಪರಂಪರೆ ಹೊಂದಿರುವ ರಾಷ್ಟ್ರ. ಸಂಗೀತವು ಜೀವನದಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ನೂರು ಮಂತ್ರ ಪಠಿಸುವ ಬದಲು ಒಮ್ಮೆ ಹಾಡಿ ಎಂಬ ಮಾತು ನಿಜವಾಗಿದೆ. ಸಂಗೀತವನ್ನು ವೃತ್ತಿಯಲ್ಲಿ ಅಳವಡಿಸಿದಾಗ ವ್ಯಕ್ತಿತ್ವ ಮತ್ತು ಬೋಧನೆಯು ಸಮತೋಲನಗೊಳ್ಳುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ತಿಳಿಸಿದರು.


ಕಾರ್ಯಕ್ರಮದಲ್ಲಿ ಅರುಣ್ ರಾವ್ ನಂದಾವರ ಕೌಳಿಗೆ, ಮಾಲಿಕರು, ಸಿರಿಧಾನ್ಯ ಮಳಿಗೆ, ಬೆಂಗಳೂರು, ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಹರೀಶ್ ಕುಮಾರ್, ಅನುಷಾ ಡಿ ಜೆ, ಚೈತ್ರ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ ಅತಿಥಿ ಪರಿಚಯಿಸಿ, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಮಹಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya
error: Content is protected !!