23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

ಗುರುವಾಯನಕೆರೆ: ವಿದ್ವತ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು, ಮತ್ತು ವಿದ್ವತ್ ಪದವಿ ಪೂರ್ವ ಕಾಲೇಜು ಶಕ್ತಿನಗರ ಗುರುವಾಯನಕೆರೆಯ ಸಹಯೋಗದೊಂದಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ ಸೆ.26 ರಂದು ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ವತ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ವಹಿಸಿ ಉದ್ಘಾಟನಾ ಭಾಷಣದೊಂದಿಗೆ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು.


ಅಧ್ಯಕ್ಷತೆಯನ್ನು ವೆಂಕಟೇಶ ಸುಬ್ರಾಯ ಪಟಗಾರ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ ದ.ಕ ಜಿ.ಪಂ ಮಂಗಳೂರು ವಹಿಸಿ ಬೆಳ್ತಂಗಡಿ ಹಾಗೂ ಮೂಡುಬಿದ್ರಿಯ ವಲಯದ 113 ಪ್ರೌಢಶಾಲಾ ಮುಖ್ಯಶಿಕ್ಷಕರುಗಳಿಗೆ ಶೈಕ್ಷಣಿಕ ಸಾಲಿನ ಸವಾಲುಗಳ ಕುರಿತು ಹಾಗೂ ಉತ್ತಮ ಫಲಿತಾಂಶಗಳನ್ನು ನೀಡುವ ಕುರಿತು ತಿಳಿಸಿದರು.

ವೇದಿಕೆಯಲ್ಲಿ ಶ್ರೀಮತಿ ರಾಜಲಕ್ಷಿ ಉಪನಿರ್ದೇಶಕರು (ಅಭಿವ್ರದ್ಧಿ) ಡಯಾಟ್ ಇಲಾಖೆ ದ.ಕ.ಜಿ ಪಂಚಾಯತ್ ಮಂಗಳೂರು, ಬೆಳ್ತಂಗಡಿ ಶಿಕ್ಷಣಾಧಿಕಾರಿಗಳು ಶ್ರೀಮತಿ ತಾರಕೇಸರಿ , ಮೂಡುಬಿದ್ರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿರೂಪಾಕ್ಷಪ್ಪ ಹೆಚ್. ಎಸ್, ಜಿಲ್ಲಾ ಶಿಕ್ಷಣಾಧಿಕಾರಿಗಳು ಲಕ್ಷೀನಾರಾಯಣ , ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷರು ವೆಂಕಟೇಶ ತುಳುಪಳೆ , ಕಾಲೇಜಿನ ಕೋಶಾಧಿಕಾರಿ ಎಂ.ಕೆ ಕಾಶಿನಾಥ್ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರಾಧಾಕೃಷ್ಣ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ನೆರವೇರಿಸಿದರು. ಕಾರ್ಯಕ್ರಮದ ಪೂರ್ವಭಾವಿಯಾಗಿ 45 ನಿಮಿಷಗಳ ಉನ್ನತ ಶಿಕ್ಷಣಪಥ ಕಾರ್ಯಕ್ರಮವನ್ನು ವಿದ್ವತ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ ನಡೆಸಿಕೊಟ್ಟರು. ಕಾರ್ಯಕ್ರಮ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ ಹಾಗೂ ಆಡಳಿತ ಅಧಿಕಾರಿ ಚಂದ್ರಶೇಖರ್ ಗೌಡ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya
error: Content is protected !!