25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

ಬಂದಾರು: ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ಸು ವ್ಯವಸ್ಥೆ ಇಲ್ಲದೆ ಬಂದಾರುವಿನಲ್ಲಿ ಬೆಳಿಗ್ಗೆ ಹೊತ್ತಿನಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಂದಾರು ಪಂಚಾಯತ್ ಬಳಿಯಿಂದ ಬೆಳಗ್ಗೆ 7.00 ಗಂಟೆಗೆ ಬೈಪಾಡಿ – ಕೊಯ್ಯೂರು – ಬೆಳ್ತಂಗಡಿ ಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ದಿನ ಬರುತ್ತೆ ಇನ್ನೋಂದು ದಿನ ಇರೋದಿಲ್ಲ. ಕೊಯ್ಯೂರು ಪಿಜಕ್ಕಳ ಬಳಿ ಗೇರ್ ಸಮಸ್ಯೆ ಯಿಂದ ಬಾಕಿಯಾಗೋದು ಇದು ಮಾಮೂಲು ಆಗಿದೆ.

ಸಂಜೆ 4.15 ಗಂಟೆಗೆ ಬೆಳ್ತಂಗಡಿಯಿಂದ , ಕೊಯ್ಯುರು, ಬೈಪಾಡಿ ಮಾರ್ಗವಾಗಿ ಬಂದಾರು ಪಂಚಾಯತ್ ಬಳಿಗೆ ಬಂದು ತಿರುಗಿ ವಾಪಾಸ್ ಆಗುತ್ತದೆ. ಆದ್ರೆ ಕೆಲವೊಂದು ದಿನದ ಸಂಚಾರಕ್ಕೆ ಯೋಗ್ಯವಿಲ್ಲದ ಬಸ್ ಕಳುಹಿಸಿ ಶಾಲಾ ಮಕ್ಕಳನ್ನು ಬೈಪಾಡಿ ಬಳಿ ಹಾಗೂ ಬಂದಾರು ಮಿಲ್ಕ್ ಡೈರಿ ಇಳಿಸಿ ಹೋಗ್ತಾರೆ ಕೇಳಿದ್ರೆ ಅಲ್ಲಿ ಹೋಗೋಕೆ ಆಗಲ್ಲ ಅಂತ ಹೇಳ್ತಾರೆ ಉತ್ತರ ನೀಡುತ್ತಾರೆ.

ಸಂಜೆ ಕಾಂತಾಜೆ ಕೊಯ್ಯುರು ಬಳಿ ಬಸ್ ಮುಂದೆ ಚಳಿಸದೇ ಮಕ್ಕಳಲ್ಲೆ ದುಡಿಸಿದ ಪ್ರಸಂಗ ನಡೆದಿದೆ. ಎಷ್ಟು ದೂಡಿದ್ರು ಬಸ್ ಮುಂದೆ ಸಾಗಲ್ಲ ಕೊನೆಗೆ ಅಲ್ಲೇ ಜಖಂ ಆಗುತ್ತೆ, ಅದ್ರಲ್ಲೇ ಬoದಿರುವ ಮಕ್ಕಳ ಕಥೆ ಅಯೋಮಯವಾಗುತ್ತದೆ.

ಇತ್ತೀಚಿಗೆ ಕೊಯ್ಯುರು ಕಾಲೇಜು ಬಳಿ ಬಸ್ ನ ಗೇರ್ ಬೀಳೋದಿಲ್ಲ ಅಂತ ಹೇಳಿ ಬೈಪಾಡಿ ತನಕ ಬಸ್ ಬಂದು ಅಲ್ಲೇ ಮಕ್ಕಳನ್ನು ಇಳಿಸಿ ಹೋಗಿದ್ದಾರೆ .ಶಾಲಾ, ಕಾಲೇಜು, ವಿದ್ಯಾರ್ಥಿಗಳು, ಉದ್ಯೋಗ ಕ್ಕೆ ತೆರಳುವವರು, ಪ್ರಯಾಣಿಕರ ಸಮಸ್ಯೆಗೆ ಇತ್ಯರ್ಥ ಯಾವಾಗ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!