25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಸಂಗೀತ-ವೃತ್ತಿ- ವ್ಯಕ್ತಿತ್ವ ಎಂಬ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾ ಸೌರಭ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ವಿದ್ವಾನ್ ದತ್ತಾತ್ರಿ ಇವರು ಮಾತನಾಡಿ ಸಂಗೀತ ಎಂಬುದು ಕಬ್ಬಿಣದ ಕಡಲೆಯಲ್ಲ ಮನಸ್ಸಿಗೆ ಸಂತೋಷ ಹಾಗೂ ಆತ್ಮಕ್ಕೆ ಸಮಾಧಾನ ನೀಡುವ ಸಾಧನ. ಸಂಗೀತ ಕಲಿತರೆ ಸಾಕು ನಾವು ದೇವರಿಗೆ ಸಮೀಪಿಸುತ್ತೇವೆ, ಸಂಗೀತ ಎನ್ನುವುದು ಜೀವನವನ್ನು ಕೊಡುತ್ತದೆ, ಮನುಷ್ಯನ ನೋವು ನಲಿವಿನಲ್ಲಿ ಜೊತೆಯಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮತ್ತೋರ್ವ ಅತಿಥಿಗಳಾದ ಡಾ. ರಾಜೇಶ್ ನಾಯಕ್, ಅಧ್ಯಕ್ಷರು, ರಾಜಶ್ರೀ ಜೀವನ ಕೌಶಲ ತರಬೇತಿ ಕೇಂದ್ರ, ಬೆಂಗಳೂರು ಇವರು ಮಾತನಾಡಿ ನಮ್ಮ ಜ್ಞಾನ ನಾವೆಷ್ಟು ಕಲಿಸುತ್ತೇವೆ ಅದರ ಮೇಲೆ ಅವಲಂಬಿತವಾಗಿದೆ. ಸಂಗೀತವು ಒತ್ತಡ ನಿವಾರಣೆಯಲ್ಲಿ ಸಹಕರಿಸುತ್ತದೆ. ಜೀವನದ ದಾರಿಯನ್ನು ಸುಗಮಗೊಳಿಸುತ್ತದೆ. ನಾವು ಕಲಿಸಲು ಆರಂಭಿಸಿದ ಮೇಲೆ ನಾವು ಕಲಿಯುತ್ತೇವೆ ಎಂದರು.


ನಮ್ಮದು ಗುರುಪರಂಪರೆ ಹೊಂದಿರುವ ರಾಷ್ಟ್ರ. ಸಂಗೀತವು ಜೀವನದಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ನೂರು ಮಂತ್ರ ಪಠಿಸುವ ಬದಲು ಒಮ್ಮೆ ಹಾಡಿ ಎಂಬ ಮಾತು ನಿಜವಾಗಿದೆ. ಸಂಗೀತವನ್ನು ವೃತ್ತಿಯಲ್ಲಿ ಅಳವಡಿಸಿದಾಗ ವ್ಯಕ್ತಿತ್ವ ಮತ್ತು ಬೋಧನೆಯು ಸಮತೋಲನಗೊಳ್ಳುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ತಿಳಿಸಿದರು.


ಕಾರ್ಯಕ್ರಮದಲ್ಲಿ ಅರುಣ್ ರಾವ್ ನಂದಾವರ ಕೌಳಿಗೆ, ಮಾಲಿಕರು, ಸಿರಿಧಾನ್ಯ ಮಳಿಗೆ, ಬೆಂಗಳೂರು, ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಹರೀಶ್ ಕುಮಾರ್, ಅನುಷಾ ಡಿ ಜೆ, ಚೈತ್ರ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ ಅತಿಥಿ ಪರಿಚಯಿಸಿ, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಮಹಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya
error: Content is protected !!