23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಸಂಗೀತ-ವೃತ್ತಿ- ವ್ಯಕ್ತಿತ್ವ ಎಂಬ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾ ಸೌರಭ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ವಿದ್ವಾನ್ ದತ್ತಾತ್ರಿ ಇವರು ಮಾತನಾಡಿ ಸಂಗೀತ ಎಂಬುದು ಕಬ್ಬಿಣದ ಕಡಲೆಯಲ್ಲ ಮನಸ್ಸಿಗೆ ಸಂತೋಷ ಹಾಗೂ ಆತ್ಮಕ್ಕೆ ಸಮಾಧಾನ ನೀಡುವ ಸಾಧನ. ಸಂಗೀತ ಕಲಿತರೆ ಸಾಕು ನಾವು ದೇವರಿಗೆ ಸಮೀಪಿಸುತ್ತೇವೆ, ಸಂಗೀತ ಎನ್ನುವುದು ಜೀವನವನ್ನು ಕೊಡುತ್ತದೆ, ಮನುಷ್ಯನ ನೋವು ನಲಿವಿನಲ್ಲಿ ಜೊತೆಯಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮತ್ತೋರ್ವ ಅತಿಥಿಗಳಾದ ಡಾ. ರಾಜೇಶ್ ನಾಯಕ್, ಅಧ್ಯಕ್ಷರು, ರಾಜಶ್ರೀ ಜೀವನ ಕೌಶಲ ತರಬೇತಿ ಕೇಂದ್ರ, ಬೆಂಗಳೂರು ಇವರು ಮಾತನಾಡಿ ನಮ್ಮ ಜ್ಞಾನ ನಾವೆಷ್ಟು ಕಲಿಸುತ್ತೇವೆ ಅದರ ಮೇಲೆ ಅವಲಂಬಿತವಾಗಿದೆ. ಸಂಗೀತವು ಒತ್ತಡ ನಿವಾರಣೆಯಲ್ಲಿ ಸಹಕರಿಸುತ್ತದೆ. ಜೀವನದ ದಾರಿಯನ್ನು ಸುಗಮಗೊಳಿಸುತ್ತದೆ. ನಾವು ಕಲಿಸಲು ಆರಂಭಿಸಿದ ಮೇಲೆ ನಾವು ಕಲಿಯುತ್ತೇವೆ ಎಂದರು.


ನಮ್ಮದು ಗುರುಪರಂಪರೆ ಹೊಂದಿರುವ ರಾಷ್ಟ್ರ. ಸಂಗೀತವು ಜೀವನದಲ್ಲಿ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ನೂರು ಮಂತ್ರ ಪಠಿಸುವ ಬದಲು ಒಮ್ಮೆ ಹಾಡಿ ಎಂಬ ಮಾತು ನಿಜವಾಗಿದೆ. ಸಂಗೀತವನ್ನು ವೃತ್ತಿಯಲ್ಲಿ ಅಳವಡಿಸಿದಾಗ ವ್ಯಕ್ತಿತ್ವ ಮತ್ತು ಬೋಧನೆಯು ಸಮತೋಲನಗೊಳ್ಳುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ತಿಳಿಸಿದರು.


ಕಾರ್ಯಕ್ರಮದಲ್ಲಿ ಅರುಣ್ ರಾವ್ ನಂದಾವರ ಕೌಳಿಗೆ, ಮಾಲಿಕರು, ಸಿರಿಧಾನ್ಯ ಮಳಿಗೆ, ಬೆಂಗಳೂರು, ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಹರೀಶ್ ಕುಮಾರ್, ಅನುಷಾ ಡಿ ಜೆ, ಚೈತ್ರ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ ಅತಿಥಿ ಪರಿಚಯಿಸಿ, ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಮಹಾಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಗೌಡ ಸಮುದಾಯದವರು ಜಾತಿ ಕಾಲಂನಲ್ಲಿ ಒಕ್ಕಲಿಗ , ಉಪಜಾತಿ ಕಾಲಂನಲ್ಲಿ ಗೌಡ ಎಂದು ನಮೂದಿಸುವಂತೆ ತಾಲೂಕು ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಹೇಳಿಕೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!