23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

ಗುರುವಾಯನಕೆರೆ: ವಿದ್ವತ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು, ಮತ್ತು ವಿದ್ವತ್ ಪದವಿ ಪೂರ್ವ ಕಾಲೇಜು ಶಕ್ತಿನಗರ ಗುರುವಾಯನಕೆರೆಯ ಸಹಯೋಗದೊಂದಿಗೆ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ ಸೆ.26 ರಂದು ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿದ್ವತ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರು ವಹಿಸಿ ಉದ್ಘಾಟನಾ ಭಾಷಣದೊಂದಿಗೆ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು.


ಅಧ್ಯಕ್ಷತೆಯನ್ನು ವೆಂಕಟೇಶ ಸುಬ್ರಾಯ ಪಟಗಾರ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ ದ.ಕ ಜಿ.ಪಂ ಮಂಗಳೂರು ವಹಿಸಿ ಬೆಳ್ತಂಗಡಿ ಹಾಗೂ ಮೂಡುಬಿದ್ರಿಯ ವಲಯದ 113 ಪ್ರೌಢಶಾಲಾ ಮುಖ್ಯಶಿಕ್ಷಕರುಗಳಿಗೆ ಶೈಕ್ಷಣಿಕ ಸಾಲಿನ ಸವಾಲುಗಳ ಕುರಿತು ಹಾಗೂ ಉತ್ತಮ ಫಲಿತಾಂಶಗಳನ್ನು ನೀಡುವ ಕುರಿತು ತಿಳಿಸಿದರು.

ವೇದಿಕೆಯಲ್ಲಿ ಶ್ರೀಮತಿ ರಾಜಲಕ್ಷಿ ಉಪನಿರ್ದೇಶಕರು (ಅಭಿವ್ರದ್ಧಿ) ಡಯಾಟ್ ಇಲಾಖೆ ದ.ಕ.ಜಿ ಪಂಚಾಯತ್ ಮಂಗಳೂರು, ಬೆಳ್ತಂಗಡಿ ಶಿಕ್ಷಣಾಧಿಕಾರಿಗಳು ಶ್ರೀಮತಿ ತಾರಕೇಸರಿ , ಮೂಡುಬಿದ್ರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿರೂಪಾಕ್ಷಪ್ಪ ಹೆಚ್. ಎಸ್, ಜಿಲ್ಲಾ ಶಿಕ್ಷಣಾಧಿಕಾರಿಗಳು ಲಕ್ಷೀನಾರಾಯಣ , ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷರು ವೆಂಕಟೇಶ ತುಳುಪಳೆ , ಕಾಲೇಜಿನ ಕೋಶಾಧಿಕಾರಿ ಎಂ.ಕೆ ಕಾಶಿನಾಥ್ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರಾಧಾಕೃಷ್ಣ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರು ನೆರವೇರಿಸಿದರು. ಕಾರ್ಯಕ್ರಮದ ಪೂರ್ವಭಾವಿಯಾಗಿ 45 ನಿಮಿಷಗಳ ಉನ್ನತ ಶಿಕ್ಷಣಪಥ ಕಾರ್ಯಕ್ರಮವನ್ನು ವಿದ್ವತ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ ನಡೆಸಿಕೊಟ್ಟರು. ಕಾರ್ಯಕ್ರಮ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ ಹಾಗೂ ಆಡಳಿತ ಅಧಿಕಾರಿ ಚಂದ್ರಶೇಖರ್ ಗೌಡ ಕೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಮದ್ದಡ್ಕ ಪಡ್ಡೆಲು ನಿವಾಸಿ ಶೀಲಾವತಿ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
error: Content is protected !!