25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಕರಾಯ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸದಸ್ಯರು ಯಾವ ರೀತಿ ಆರ್ಥಿಕ ವ್ಯವಹಾರ ಕಲಿತುಕೊಂಡ್ರು, ಯೋಜನೆಯಿಂದ ಸದಸ್ಯರಿಗೆ ಹಾಗೂ ಸಮಾಜಕ್ಕೆ ಆಗಿರುವ ಅನುಕೂಲತೆಗಳ ಬಗ್ಗೆ ತಿಳಿಸಿಕೊಟ್ಟರು, ಒಕ್ಕೂಟದ ಅಧ್ಯಕ್ಷ ರಘುರಾಮ್ ಶೆಟ್ಟಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳನ್ನು ಸದಸ್ಯರು ಬಳಕೆ ಮಾಡಿಕೊಳ್ಳಬೇಕು ಪ್ರಗತಿನಿಧಿ ಬ್ಯಾಂಕಿಂಗ್ ವ್ಯವಹಾರವನ್ನು ಸದಸ್ಯರು ಅಚ್ಚುಕಟ್ಟಾಗಿ ವ್ಯವಹರಿಸಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿಕೊಂಡಂತಹ ಮೀನಾಕ್ಷಿಯವರು ಜ್ಞಾನ ವಿಕಾಸ ಕಾರ್ಯಕ್ರಮದಿಂದ ಸಿಗುವ ಪ್ರೀತಿ, ವಾತ್ಸಲ್ಯ, ಶಿಸ್ತು ಹಾಗೂ ಭಾಗವಹಿಸುವಿಕೆ, ಗುರುತಿಸುವಿಕೆ ಹಾಗೂ ತಾಯಿ ವಾತ್ಸಲ್ಯದ ಮಮತೆಯ ಬಗ್ಗೆ ಸದಸ್ಯರಿಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಗುಣಕರ್ ಶುಭ ಹಾರೈಸಿದರು,

ವಿಕ್ರಂ ಕೇಂದ್ರದ ಸದಸ್ಯರು ಜಾನಪದ ಗೀತೆಯ ನೃತ್ಯ ಹಾಡು, ಆಟೋಟ ಸ್ಪರ್ಧೆಗಳನ್ನು ಮಾಡಿದರು, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ನಿರೂಪಿಸಿ ಸೇವಾಪ್ರತಿನಿಧಿ ಸಂದ್ಯಾ ಸ್ವಾಗತಿಸಿ ಕೇಂದ್ರ ಸೇವಾಪ್ರತಿನಿಧಿ ಸುಜಾತ ಧನ್ಯವಾದವಿತ್ತರು.

Related posts

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!