24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ

ತಣ್ಣೀರುಪoತ ವಲಯದ ಕರಾಯ ಕಾರ್ಯಕ್ಷೇತ್ರದಲ್ಲಿ ವಿಕ್ರಂ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಕರಾಯ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸದಸ್ಯರು ಯಾವ ರೀತಿ ಆರ್ಥಿಕ ವ್ಯವಹಾರ ಕಲಿತುಕೊಂಡ್ರು, ಯೋಜನೆಯಿಂದ ಸದಸ್ಯರಿಗೆ ಹಾಗೂ ಸಮಾಜಕ್ಕೆ ಆಗಿರುವ ಅನುಕೂಲತೆಗಳ ಬಗ್ಗೆ ತಿಳಿಸಿಕೊಟ್ಟರು, ಒಕ್ಕೂಟದ ಅಧ್ಯಕ್ಷ ರಘುರಾಮ್ ಶೆಟ್ಟಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳನ್ನು ಸದಸ್ಯರು ಬಳಕೆ ಮಾಡಿಕೊಳ್ಳಬೇಕು ಪ್ರಗತಿನಿಧಿ ಬ್ಯಾಂಕಿಂಗ್ ವ್ಯವಹಾರವನ್ನು ಸದಸ್ಯರು ಅಚ್ಚುಕಟ್ಟಾಗಿ ವ್ಯವಹರಿಸಬೇಕು ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿಕೊಂಡಂತಹ ಮೀನಾಕ್ಷಿಯವರು ಜ್ಞಾನ ವಿಕಾಸ ಕಾರ್ಯಕ್ರಮದಿಂದ ಸಿಗುವ ಪ್ರೀತಿ, ವಾತ್ಸಲ್ಯ, ಶಿಸ್ತು ಹಾಗೂ ಭಾಗವಹಿಸುವಿಕೆ, ಗುರುತಿಸುವಿಕೆ ಹಾಗೂ ತಾಯಿ ವಾತ್ಸಲ್ಯದ ಮಮತೆಯ ಬಗ್ಗೆ ಸದಸ್ಯರಿಗೆ ತಿಳಿಸಿದರು. ವಲಯ ಮೇಲ್ವಿಚಾರಕರು ಗುಣಕರ್ ಶುಭ ಹಾರೈಸಿದರು,

ವಿಕ್ರಂ ಕೇಂದ್ರದ ಸದಸ್ಯರು ಜಾನಪದ ಗೀತೆಯ ನೃತ್ಯ ಹಾಡು, ಆಟೋಟ ಸ್ಪರ್ಧೆಗಳನ್ನು ಮಾಡಿದರು, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ನಿರೂಪಿಸಿ ಸೇವಾಪ್ರತಿನಿಧಿ ಸಂದ್ಯಾ ಸ್ವಾಗತಿಸಿ ಕೇಂದ್ರ ಸೇವಾಪ್ರತಿನಿಧಿ ಸುಜಾತ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya
error: Content is protected !!