23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ಸೆ.27ರಂದು ಜರಗಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ ಎಲ್ಲರನ್ನು ಸ್ವಾಗತಿಸಿದರು. ಸಭೆಯಲ್ಲಿ ವಾರ್ಷಿಕ ವರದಿ ವಾಚನವನ್ನು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ವಾಚಿಸಿದರು. ಲೆಕ್ಕಪತ್ರವನ್ನು ವಕೀಲರ ಸಂಘದ ಕೋಶಾಧಿಕಾರಿಯಾದ ಪ್ರಶಾಂತ್ ಎಂ ಮಂಡಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಿದ್ದ ಸಂಘದ ಸದಸ್ಯರಾದ ಶಶಿಕಿರಣ್ ಜೈನ್, ಶ್ರೀನಿವಾಸ ಗೌಡ ಬೆಳಾಲು ಮತ್ತು ಗಣೇಶ್ ಗೌಡ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮಹಾಸಭೆಯಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಮರಕಡ ಅಧ್ಯಕ್ಷೀಯ ಭಾಷಣ ನೆರವೇರಿಸಿದರು.
ವೇದಿಕೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಉದಯ ಕುಮಾರ್ ಬಿ.ಕೆ ನಡೆಸಿಕೊಟ್ಟರು. ಕಾರ್ಯಕ್ರಮದ ಭೋಜನದ ವ್ಯವಸ್ಥೆಯನ್ನು ಶ್ರೀನಿವಾಸ್ ಗೌಡ ಬೆಳಾಲು ಮಾಡಿರುತ್ತಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಧನ್ಯವಾದ ಸಮರ್ಪಿಸಿದರು.

Related posts

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ ರವರಿಗೆ ಮಂಗಳೂರು ಹೈಕೋರ್ಟ್ ಪೀಠ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅಭಿನಂದನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya
error: Content is protected !!