July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ಸೆ.27ರಂದು ಜರಗಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ ಎಲ್ಲರನ್ನು ಸ್ವಾಗತಿಸಿದರು. ಸಭೆಯಲ್ಲಿ ವಾರ್ಷಿಕ ವರದಿ ವಾಚನವನ್ನು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ವಾಚಿಸಿದರು. ಲೆಕ್ಕಪತ್ರವನ್ನು ವಕೀಲರ ಸಂಘದ ಕೋಶಾಧಿಕಾರಿಯಾದ ಪ್ರಶಾಂತ್ ಎಂ ಮಂಡಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಿದ್ದ ಸಂಘದ ಸದಸ್ಯರಾದ ಶಶಿಕಿರಣ್ ಜೈನ್, ಶ್ರೀನಿವಾಸ ಗೌಡ ಬೆಳಾಲು ಮತ್ತು ಗಣೇಶ್ ಗೌಡ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮಹಾಸಭೆಯಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಮರಕಡ ಅಧ್ಯಕ್ಷೀಯ ಭಾಷಣ ನೆರವೇರಿಸಿದರು.
ವೇದಿಕೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಉದಯ ಕುಮಾರ್ ಬಿ.ಕೆ ನಡೆಸಿಕೊಟ್ಟರು. ಕಾರ್ಯಕ್ರಮದ ಭೋಜನದ ವ್ಯವಸ್ಥೆಯನ್ನು ಶ್ರೀನಿವಾಸ್ ಗೌಡ ಬೆಳಾಲು ಮಾಡಿರುತ್ತಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಧನ್ಯವಾದ ಸಮರ್ಪಿಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಸೌಜನ್ಯ ಪ್ರಕರಣ ವಿಚಾರಣೆ ಜು.21 ಕ್ಕೆ ಮುಂದೂಡಿಕೆ

Suddi Udaya

ಗುರುವಾಯನಕೆರೆ:ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ )ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು:ಉಪ್ಪಿನಂಗಡಿ ತಾಲೂಕು ಶ್ರೀ ಪಾಂಡುರಂಗ ಶಾಖೆ ಗುರುವಾಯನಕೆರೆ – ವಾರ್ಷಿಕೋತ್ಸವ ವೈಭವ

Suddi Udaya
error: Content is protected !!