July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಸಭಾಭವನದಲ್ಲಿ ಸೆ.27ರಂದು ಜರಗಿತು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ ಎಲ್ಲರನ್ನು ಸ್ವಾಗತಿಸಿದರು. ಸಭೆಯಲ್ಲಿ ವಾರ್ಷಿಕ ವರದಿ ವಾಚನವನ್ನು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ವಾಚಿಸಿದರು. ಲೆಕ್ಕಪತ್ರವನ್ನು ವಕೀಲರ ಸಂಘದ ಕೋಶಾಧಿಕಾರಿಯಾದ ಪ್ರಶಾಂತ್ ಎಂ ಮಂಡಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ವಿವಿಧ ಕಾರ್ಯಕ್ರಮಗಳಲ್ಲಿ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಿದ್ದ ಸಂಘದ ಸದಸ್ಯರಾದ ಶಶಿಕಿರಣ್ ಜೈನ್, ಶ್ರೀನಿವಾಸ ಗೌಡ ಬೆಳಾಲು ಮತ್ತು ಗಣೇಶ್ ಗೌಡ ಇವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮಹಾಸಭೆಯಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಸಂಘದ ಅಧ್ಯಕ್ಷರಾದ ವಸಂತ ಮರಕಡ ಅಧ್ಯಕ್ಷೀಯ ಭಾಷಣ ನೆರವೇರಿಸಿದರು.
ವೇದಿಕೆಯಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರೂಪಣೆಯನ್ನು ವಕೀಲರಾದ ಉದಯ ಕುಮಾರ್ ಬಿ.ಕೆ ನಡೆಸಿಕೊಟ್ಟರು. ಕಾರ್ಯಕ್ರಮದ ಭೋಜನದ ವ್ಯವಸ್ಥೆಯನ್ನು ಶ್ರೀನಿವಾಸ್ ಗೌಡ ಬೆಳಾಲು ಮಾಡಿರುತ್ತಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾದ ನವೀನ್ ಬಿ.ಕೆ ಧನ್ಯವಾದ ಸಮರ್ಪಿಸಿದರು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!