April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯೀ ದೇವಸ್ಥಾನ, ಅಂಬರಕಾಪು, ಹತ್ಯಡ್ಕ ಗ್ರಾಮ ಇದರ ಜೀರ್ಣೋದ್ಧಾರಕ್ಕಾಗಿ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನಂ, ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಹಾಗೂ ತತ್ಕರಕಮಲಸಂಜಾತರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾ ಸನ್ನಿಧಾನಂಗಳವರು ಆಶೀರ್ವಾದ ಪೂರ್ವಕವಾಗಿ ರೂ. ಐದು ಲಕ್ಷದ ಮೊತ್ತವನ್ನು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಅಂಬರಕಾಪು ಎಂಬಲ್ಲಿ ಸುಮಾರು ಮುನ್ನೂರು ವರ್ಷ ಹಳೆಯ ಶ್ರೀ ವಿಠೋಬ ರಕುಮಾಯಿ ದೇವಸ್ಥಾನವು ಇದೀಗ ಜೀರ್ಣೋದ್ಧಾರಗೊಳ್ಳುತ್ತಿದೆ. ನೆಕ್ಕರಡ್ಕದ ಗೋಖಲೆ ಕುಟುಂಬಸ್ಥರು ಈ ದೇವಸ್ಥಾನವನ್ನು ಸ್ಥಾಪಿಸಿ, ಇಂದಿನವರೆಗೂ ಮೊಕ್ತೇಸರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಇದೀಗ ದೇಗುಲವು ಜೀರ್ಣಾವಸ್ಥೆಗೆ ತಲುಪಿದ್ದು ಜೀರ್ಣೋದ್ಧಾರದ ಕಾರ್ಯಗಳು ಪ್ರಾರಂಭವಾಗಿವೆ.‌ ಈ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಲ್ಲಿ ಶುಭಾಶೀರ್ವಾದದ ಜೊತೆಗೆ ಧನ ಸಹಾಯವನ್ನು ಯಾಚಿಸಿದ ಹಿನ್ನೆಲೆಯಲ್ಲಿ ಜಗದ್ಗುರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆಶೀರ್ಮಂತ್ರಾಕ್ಷತೆಯ ಜೊತೆಗೆ ರೂ. ಐದು ಲಕ್ಷದ ಚೆಕ್ ಅನ್ನು ದೇವಸ್ಥಾನದ ಸಮಿತಿಗೆ ಕಳುಹಿಸಿದ್ದಾರೆ.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya
error: Content is protected !!