25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

ಬಂದಾರು: ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ಸು ವ್ಯವಸ್ಥೆ ಇಲ್ಲದೆ ಬಂದಾರುವಿನಲ್ಲಿ ಬೆಳಿಗ್ಗೆ ಹೊತ್ತಿನಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಂದಾರು ಪಂಚಾಯತ್ ಬಳಿಯಿಂದ ಬೆಳಗ್ಗೆ 7.00 ಗಂಟೆಗೆ ಬೈಪಾಡಿ – ಕೊಯ್ಯೂರು – ಬೆಳ್ತಂಗಡಿ ಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ದಿನ ಬರುತ್ತೆ ಇನ್ನೋಂದು ದಿನ ಇರೋದಿಲ್ಲ. ಕೊಯ್ಯೂರು ಪಿಜಕ್ಕಳ ಬಳಿ ಗೇರ್ ಸಮಸ್ಯೆ ಯಿಂದ ಬಾಕಿಯಾಗೋದು ಇದು ಮಾಮೂಲು ಆಗಿದೆ.

ಸಂಜೆ 4.15 ಗಂಟೆಗೆ ಬೆಳ್ತಂಗಡಿಯಿಂದ , ಕೊಯ್ಯುರು, ಬೈಪಾಡಿ ಮಾರ್ಗವಾಗಿ ಬಂದಾರು ಪಂಚಾಯತ್ ಬಳಿಗೆ ಬಂದು ತಿರುಗಿ ವಾಪಾಸ್ ಆಗುತ್ತದೆ. ಆದ್ರೆ ಕೆಲವೊಂದು ದಿನದ ಸಂಚಾರಕ್ಕೆ ಯೋಗ್ಯವಿಲ್ಲದ ಬಸ್ ಕಳುಹಿಸಿ ಶಾಲಾ ಮಕ್ಕಳನ್ನು ಬೈಪಾಡಿ ಬಳಿ ಹಾಗೂ ಬಂದಾರು ಮಿಲ್ಕ್ ಡೈರಿ ಇಳಿಸಿ ಹೋಗ್ತಾರೆ ಕೇಳಿದ್ರೆ ಅಲ್ಲಿ ಹೋಗೋಕೆ ಆಗಲ್ಲ ಅಂತ ಹೇಳ್ತಾರೆ ಉತ್ತರ ನೀಡುತ್ತಾರೆ.

ಸಂಜೆ ಕಾಂತಾಜೆ ಕೊಯ್ಯುರು ಬಳಿ ಬಸ್ ಮುಂದೆ ಚಳಿಸದೇ ಮಕ್ಕಳಲ್ಲೆ ದುಡಿಸಿದ ಪ್ರಸಂಗ ನಡೆದಿದೆ. ಎಷ್ಟು ದೂಡಿದ್ರು ಬಸ್ ಮುಂದೆ ಸಾಗಲ್ಲ ಕೊನೆಗೆ ಅಲ್ಲೇ ಜಖಂ ಆಗುತ್ತೆ, ಅದ್ರಲ್ಲೇ ಬoದಿರುವ ಮಕ್ಕಳ ಕಥೆ ಅಯೋಮಯವಾಗುತ್ತದೆ.

ಇತ್ತೀಚಿಗೆ ಕೊಯ್ಯುರು ಕಾಲೇಜು ಬಳಿ ಬಸ್ ನ ಗೇರ್ ಬೀಳೋದಿಲ್ಲ ಅಂತ ಹೇಳಿ ಬೈಪಾಡಿ ತನಕ ಬಸ್ ಬಂದು ಅಲ್ಲೇ ಮಕ್ಕಳನ್ನು ಇಳಿಸಿ ಹೋಗಿದ್ದಾರೆ .ಶಾಲಾ, ಕಾಲೇಜು, ವಿದ್ಯಾರ್ಥಿಗಳು, ಉದ್ಯೋಗ ಕ್ಕೆ ತೆರಳುವವರು, ಪ್ರಯಾಣಿಕರ ಸಮಸ್ಯೆಗೆ ಇತ್ಯರ್ಥ ಯಾವಾಗ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya
error: Content is protected !!