ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

ಬಂದಾರು: ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ಸು ವ್ಯವಸ್ಥೆ ಇಲ್ಲದೆ ಬಂದಾರುವಿನಲ್ಲಿ ಬೆಳಿಗ್ಗೆ ಹೊತ್ತಿನಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬಂದಾರು ಪಂಚಾಯತ್ ಬಳಿಯಿಂದ ಬೆಳಗ್ಗೆ 7.00 ಗಂಟೆಗೆ ಬೈಪಾಡಿ – ಕೊಯ್ಯೂರು – ಬೆಳ್ತಂಗಡಿ ಗೆ ತೆರಳುವ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ದಿನ ಬರುತ್ತೆ ಇನ್ನೋಂದು ದಿನ ಇರೋದಿಲ್ಲ. ಕೊಯ್ಯೂರು ಪಿಜಕ್ಕಳ ಬಳಿ ಗೇರ್ ಸಮಸ್ಯೆ ಯಿಂದ ಬಾಕಿಯಾಗೋದು ಇದು ಮಾಮೂಲು ಆಗಿದೆ.

ಸಂಜೆ 4.15 ಗಂಟೆಗೆ ಬೆಳ್ತಂಗಡಿಯಿಂದ , ಕೊಯ್ಯುರು, ಬೈಪಾಡಿ ಮಾರ್ಗವಾಗಿ ಬಂದಾರು ಪಂಚಾಯತ್ ಬಳಿಗೆ ಬಂದು ತಿರುಗಿ ವಾಪಾಸ್ ಆಗುತ್ತದೆ. ಆದ್ರೆ ಕೆಲವೊಂದು ದಿನದ ಸಂಚಾರಕ್ಕೆ ಯೋಗ್ಯವಿಲ್ಲದ ಬಸ್ ಕಳುಹಿಸಿ ಶಾಲಾ ಮಕ್ಕಳನ್ನು ಬೈಪಾಡಿ ಬಳಿ ಹಾಗೂ ಬಂದಾರು ಮಿಲ್ಕ್ ಡೈರಿ ಇಳಿಸಿ ಹೋಗ್ತಾರೆ ಕೇಳಿದ್ರೆ ಅಲ್ಲಿ ಹೋಗೋಕೆ ಆಗಲ್ಲ ಅಂತ ಹೇಳ್ತಾರೆ ಉತ್ತರ ನೀಡುತ್ತಾರೆ.

ಸಂಜೆ ಕಾಂತಾಜೆ ಕೊಯ್ಯುರು ಬಳಿ ಬಸ್ ಮುಂದೆ ಚಳಿಸದೇ ಮಕ್ಕಳಲ್ಲೆ ದುಡಿಸಿದ ಪ್ರಸಂಗ ನಡೆದಿದೆ. ಎಷ್ಟು ದೂಡಿದ್ರು ಬಸ್ ಮುಂದೆ ಸಾಗಲ್ಲ ಕೊನೆಗೆ ಅಲ್ಲೇ ಜಖಂ ಆಗುತ್ತೆ, ಅದ್ರಲ್ಲೇ ಬoದಿರುವ ಮಕ್ಕಳ ಕಥೆ ಅಯೋಮಯವಾಗುತ್ತದೆ.

ಇತ್ತೀಚಿಗೆ ಕೊಯ್ಯುರು ಕಾಲೇಜು ಬಳಿ ಬಸ್ ನ ಗೇರ್ ಬೀಳೋದಿಲ್ಲ ಅಂತ ಹೇಳಿ ಬೈಪಾಡಿ ತನಕ ಬಸ್ ಬಂದು ಅಲ್ಲೇ ಮಕ್ಕಳನ್ನು ಇಳಿಸಿ ಹೋಗಿದ್ದಾರೆ .ಶಾಲಾ, ಕಾಲೇಜು, ವಿದ್ಯಾರ್ಥಿಗಳು, ಉದ್ಯೋಗ ಕ್ಕೆ ತೆರಳುವವರು, ಪ್ರಯಾಣಿಕರ ಸಮಸ್ಯೆಗೆ ಇತ್ಯರ್ಥ ಯಾವಾಗ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!