22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

ಮಂಗಳೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಯ ಬಗ್ಗೆ ಕ್ಷೇತ್ರಾಡಳಿತ ಸಮಿತಿಯ ಸಭೆಯು ಇತ್ತೀಚೆಗೆ ಕಂಕನಾಡಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ವಹಿಸಿದ್ದರು. ಶ್ರೀ ಕ್ಷೇತ್ರದ ಧಾರ್ಮಿಕ ವಿಧಿವಿಧಾನಗಳ ಬಗ್ಗೆ ಮತ್ತು ಕ್ಷೇತ್ರದ ಗೆಜ್ಜೆಗಿರಿ ಮೇಳ ದ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಗೆಜ್ಜೆಗಿರಿ ಮೇಳದ ಬುಕ್ಕಿಂಗ್ ಉತ್ತಮ ರೀತಿಯಲ್ಲಿ ನಡೆಯುತ್ತಿರುವ ಬಗ್ಗೆ ಸಭೆಯಲ್ಲಿ ಸಂತಸ ವ್ಯಕ್ತಪಡಿಸಲಾಯಿತು. ನವ್ರರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಕಂಕನಾಡಿ ಗರಡಿಯ ಅಧ್ಯಕ್ಷರಾದ ಚಿತ್ತರಂಜನ್ ಕಂಕನಾಡಿ ಸೂಕ್ತ ಸಲಹೆಗಳನ್ನು ನೀಡಿದರು. ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಪ್ರಸ್ತಾವನೆ ಸಲ್ಲಿಸಿದರು, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಲೆಕ್ಕಪತ್ರ ಮಂಡಿಸಿದರು.

ಸಭೆಯಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಜಯಂತ ನಡುಬೈಲ್, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಕಳೆದ ವರ್ಷದ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಟ್ರಸ್ಟಿ ಶೈಲೇಂದ್ರ ಸುವರ್ಣ, ಮೇಳದ ಸಂಚಾಲಕರು ಹಾಗೂ ಟ್ರಸ್ಟಿ ನವೀನ್ ಸುವರ್ಣ ಸಜಿಪ, ಜೊತೆ ಕಾರ್ಯದರ್ಶಿಗಳಾದ ಚಂದ್ರಶೇಖರ್ ಉಚ್ಚಿಲ್ ಮತ್ತು ಮೋಹನ್ ದಾಸ್ ವಾಮಂಜೂರು, ಕ್ಷೇತ್ರದ ತಂತ್ರಿ ಶಿವಾನಂದ ಶಾಂತಿ, ಟ್ರಸ್ಟಿ ಶ್ರೀಮತಿ ಸುಜೀತ ವಿ ಬಂಗೇರ, ಶ್ರೀಮತಿ ಜೀವಿತ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಜಯರಾಮ್ ಬಂಗೇರ, ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಮುಂತಾದವರು ಉಪಸ್ಥಿತರಿದ್ದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya
error: Content is protected !!