July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯೀ ದೇವಸ್ಥಾನ, ಅಂಬರಕಾಪು, ಹತ್ಯಡ್ಕ ಗ್ರಾಮ ಇದರ ಜೀರ್ಣೋದ್ಧಾರಕ್ಕಾಗಿ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನಂ, ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಹಾಗೂ ತತ್ಕರಕಮಲಸಂಜಾತರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾ ಸನ್ನಿಧಾನಂಗಳವರು ಆಶೀರ್ವಾದ ಪೂರ್ವಕವಾಗಿ ರೂ. ಐದು ಲಕ್ಷದ ಮೊತ್ತವನ್ನು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಅಂಬರಕಾಪು ಎಂಬಲ್ಲಿ ಸುಮಾರು ಮುನ್ನೂರು ವರ್ಷ ಹಳೆಯ ಶ್ರೀ ವಿಠೋಬ ರಕುಮಾಯಿ ದೇವಸ್ಥಾನವು ಇದೀಗ ಜೀರ್ಣೋದ್ಧಾರಗೊಳ್ಳುತ್ತಿದೆ. ನೆಕ್ಕರಡ್ಕದ ಗೋಖಲೆ ಕುಟುಂಬಸ್ಥರು ಈ ದೇವಸ್ಥಾನವನ್ನು ಸ್ಥಾಪಿಸಿ, ಇಂದಿನವರೆಗೂ ಮೊಕ್ತೇಸರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಇದೀಗ ದೇಗುಲವು ಜೀರ್ಣಾವಸ್ಥೆಗೆ ತಲುಪಿದ್ದು ಜೀರ್ಣೋದ್ಧಾರದ ಕಾರ್ಯಗಳು ಪ್ರಾರಂಭವಾಗಿವೆ.‌ ಈ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಲ್ಲಿ ಶುಭಾಶೀರ್ವಾದದ ಜೊತೆಗೆ ಧನ ಸಹಾಯವನ್ನು ಯಾಚಿಸಿದ ಹಿನ್ನೆಲೆಯಲ್ಲಿ ಜಗದ್ಗುರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆಶೀರ್ಮಂತ್ರಾಕ್ಷತೆಯ ಜೊತೆಗೆ ರೂ. ಐದು ಲಕ್ಷದ ಚೆಕ್ ಅನ್ನು ದೇವಸ್ಥಾನದ ಸಮಿತಿಗೆ ಕಳುಹಿಸಿದ್ದಾರೆ.

Related posts

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
error: Content is protected !!