September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯೀ ದೇವಸ್ಥಾನ, ಅಂಬರಕಾಪು, ಹತ್ಯಡ್ಕ ಗ್ರಾಮ ಇದರ ಜೀರ್ಣೋದ್ಧಾರಕ್ಕಾಗಿ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನಂ, ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಹಾಗೂ ತತ್ಕರಕಮಲಸಂಜಾತರಾದ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾ ಸನ್ನಿಧಾನಂಗಳವರು ಆಶೀರ್ವಾದ ಪೂರ್ವಕವಾಗಿ ರೂ. ಐದು ಲಕ್ಷದ ಮೊತ್ತವನ್ನು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಅಂಬರಕಾಪು ಎಂಬಲ್ಲಿ ಸುಮಾರು ಮುನ್ನೂರು ವರ್ಷ ಹಳೆಯ ಶ್ರೀ ವಿಠೋಬ ರಕುಮಾಯಿ ದೇವಸ್ಥಾನವು ಇದೀಗ ಜೀರ್ಣೋದ್ಧಾರಗೊಳ್ಳುತ್ತಿದೆ. ನೆಕ್ಕರಡ್ಕದ ಗೋಖಲೆ ಕುಟುಂಬಸ್ಥರು ಈ ದೇವಸ್ಥಾನವನ್ನು ಸ್ಥಾಪಿಸಿ, ಇಂದಿನವರೆಗೂ ಮೊಕ್ತೇಸರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ. ಇದೀಗ ದೇಗುಲವು ಜೀರ್ಣಾವಸ್ಥೆಗೆ ತಲುಪಿದ್ದು ಜೀರ್ಣೋದ್ಧಾರದ ಕಾರ್ಯಗಳು ಪ್ರಾರಂಭವಾಗಿವೆ.‌ ಈ ಸಂದರ್ಭದಲ್ಲಿ ಶೃಂಗೇರಿಯ ಜಗದ್ಗುರುಗಳಲ್ಲಿ ಶುಭಾಶೀರ್ವಾದದ ಜೊತೆಗೆ ಧನ ಸಹಾಯವನ್ನು ಯಾಚಿಸಿದ ಹಿನ್ನೆಲೆಯಲ್ಲಿ ಜಗದ್ಗುರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆಶೀರ್ಮಂತ್ರಾಕ್ಷತೆಯ ಜೊತೆಗೆ ರೂ. ಐದು ಲಕ್ಷದ ಚೆಕ್ ಅನ್ನು ದೇವಸ್ಥಾನದ ಸಮಿತಿಗೆ ಕಳುಹಿಸಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ: ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!