23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

ಹೊಸಂಗಡಿ: ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ , ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ, ಹೊಸಂಗಡಿ ಗ್ರಾಮ ( ಸಂಯೋಜಕರು, ಬ್ಯಾಂಕ್ ಆಫ್ ಬರೋಡ ) ಮತ್ತು ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಇವರ ಸಹಭಾಗಿತ್ವದಲ್ಲಿ, ಮುಂಚೂಣಿ ಪ್ರಾತ್ಯಕ್ಷಿಕೆ 2024-25ರ ಅಂಗವಾಗಿ, ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಸೆ. 25 ರಂದು ಫ್ರೆಂಡ್ಸ್ ಕ್ಲಬ್ ಸಭಾಭವನ, ಹೊಸಂಗಡಿಯಲ್ಲಿ ನಡೆಯಿತು.


ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ.ಕೇದಾರನಾಥ ಮತ್ತು ತೋಟಗಾರಿಕಾ ವಿಜ್ಞಾನಿ ಡಾ. ರಶ್ಮಿ ಇವರು ರೈತರಿಗೆ ಸಮಗ್ರ ಮಾಹಿತಿ ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯ ಗ್ರಾಮದ ಸಮಿತಿ, ಹೊಸಂಗಡಿ ಗ್ರಾಮ ಇದರ ಅಧ್ಯಕ್ಷರು ಮತ್ತು ಕಾರ್ಯಕ್ರಮ ಸಂಯೋಜಕರಾದ ಹರಿಪ್ರಸಾದ್. ಪಿ. ವಹಿ ಸಿ, ಪ್ರಸ್ತಾವನೆಯೊಂದಿಗೆ ಸ್ವಾಗತ ಮತ್ತು ಧನ್ಯವಾದವಿತ್ತರು.


ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆಯ ಮುಂಚೂಣಿ ಪ್ರಾತ್ಯಕ್ಷಿಕೆ 2024 – 25 ಸಾಲಿನಲ್ಲಿ ಸುಮಾರು 10 ರೈತರನ್ನು ಆಯ್ಕೆ ಮಾಡಿ ಅವರಿಗೆ ಅಡಿಕೆ ಎಲೆ ಚುಕ್ಕಿ ರೋಗದ ನಿರ್ವಹಣೆಗಾಗಿ ಪರಿಕರಗಳನ್ನು ನೀಡಲಾಯಿತು.

Related posts

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya
error: Content is protected !!