September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

ಉಜಿರೆ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ ನಡೆಯಿತು.

ಕಾರ್ಯಕ್ರಮಕ್ಕೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಯವರಾದ ಭವಾನಿ ಶಂಕರ್ ರವರು ಭೇಟಿ ನೀಡಿ, ಮಹಿಳೆಯರ ಸಬಲೀಕರಣ ಕುರಿತಂತೆ ಬಂದ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು. ಅನುದಾನಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಆರ್ಥಿಕ ವರ್ಷ 2025-26 ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲಿದ್ದು, 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಾಮಗಾರಿ ಮಾಡುವವರು ಅರ್ಜಿ ನೀಡಬಹುದು. ಮಹಿಳೆಯ ಸಬಲಿಕರಣವಾಗುವ ನಿಟ್ಟಿನಲ್ಲಿಹೆಚ್ಚಿನ ಸಂಖ್ಯೆಯಲ್ಲಿ ಕಾಮಗಾರಿ ಬೇಡಿಕೆ ಬರುವಂತೆ ಗ್ರಾ. ಪಂ ವ್ಯಾಪ್ತಿಯಲ್ಲಿ ಎಲ್ಲ ಕಡೆ ಪ್ರಚಾರ ಮಾಡಬೇಕು ಎಂದರು.

ಉಜಿರೆ ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿರವರು ಮಾತನಾಡಿ ಉದ್ಯೋಗ ಖಾತರಿ ಯೋಜನೆಯಲ್ಲಿ ಸಾಕಷ್ಟು ಸೌಲಭ್ಯಗಳಿವೆ. ಮಹಿಳೆಯರಿಗೆ ತಮ್ಮ ಜೀವನೋಪಾಯಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಮಾಡಿಕೊಂಡು ಸ್ವಾವಲಂಬನ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕೊಯ್ಯುರು ಗ್ರಾ. ಪಂ ಅಭಿವೃದೊಧಿ ಅಧಿಕಾರಿ ಪ್ರಕಾಶ್ ಎಸ್, ಬೆಳಾಲು ಗ್ರಾಮ ಪಂಚಾಯತ್ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ್, ಇಂದಬೆಟ್ಟು ಗ್ರಾ. ಪ ಕಾರ್ಯದರ್ಶಿ ಗಿರಿಯಪ್ಪ ಗೌಡ, ನಡ ಗ್ರಾ. ಪಂ ಕಾರ್ಯದರ್ಶಿ ಕಿರಣ್, ತಾಲೂಕು ತಾಂತ್ರಿಕ ಸಂಯೋಜಕರು(ಅ. ಇ) ಶ್ರೀಮತಿ ಪೂರ್ಣಿಮಾ ಎಂ. ಸಿ, ತಾಂತ್ರಿಕ ಸಹಾಯಕ ಅಭಿಯಂತರರಾದ ಶರಣ್ ರೖ, ಗೌತಮ್ , ಶ್ರೀಮತಿ ರೇಷ್ಮಾ ರಾಜ್,ಕ ತಾಂತ್ರಿಕ ಸಹಾಯಕರು (ಕೃ/ತೋ/ಅ) ಕು. ಪ್ರಾರ್ಥನ,ತಾಲೂಕು ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಬಿ. ಎಫ್. ಟಿಗಳಾದ ಶ್ರಿಮತಿ ಹೆಲನ್, ಶ್ರೀಮತಿ ವಸಂತಿ, ಪ್ರವೀಣ್, ಉಜಿರೆ ನಡ, ನಾವೂರು, ಇಂದಬೆಟ್ಟು, ಬಂದಾರು,ಮಿತ್ತಬಾಗಿಲು, ಲಾಯಿಲ, ಕೊಯ್ಯೂರು, ಬೆಳಾಲು ಗ್ರಾಮ ಪಂಚಾಯತಿಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು,ಎಮ್.ಬಿ. ಕೆ, ಎಲ್. ಸಿ. ಆರ್. ಪಿ, ಕೃಷಿ ಸಖಿ, ಪಶು ಸಖಿ, ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಯಾನಂದ ವಲಯ ಮೇಲ್ವಿಚಾರಕರು ಎನ್. ಆರ್. ಎಲ್. ಎಮ್ ತಾಲೂಕು ನಿರ್ವಹಣಾ ಘಟಕ ಇವರು ಸ್ವಾಗತಿಸಿ, ನಿರೂಪಿಸಿದರು.

Related posts

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya
error: Content is protected !!