23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಮಂಗಳೂರಿನ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ ನಲ್ಲಿ ಜರುಗಿದ ನಾಲ್ಕನೇ ಐ ಎಸ್ ಟಿ ಇ ರಾಜ್ಯಮಟ್ಟದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಸಮಾವೇಶ-2024 ಇದರಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಉಜಿರೆಯ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಈ ಎರಡು ವಿಭಾಗಗಳಲ್ಲಿ ಪ್ರತ್ಯೇಕವಾಗಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ .


ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಮಲ್ಟಿಪರ್ಪಸ್ ಅಗ್ರಿ ಟ್ರಾಲಿಯನ್ನು ವಿನ್ಯಾಸಗೊಳಿಸಲಾಗಿದೆ. ಆಧುನಿಕ ಕೃಷಿ ಪದ್ಧತಿಗೆ ಅನುಕೂಲವಾಗುವಲ್ಲಿ ಇದು ಸಹಕಾರಿಯಾಗಿದೆ. ಈ ಟ್ರಾಲಿಯನ್ನು ಬೈಕ್ ಮತ್ತು ಓಮಿನಿ ಬಿಡಿಭಾಗಗಳನ್ನು ಬಳಸಿ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳಾದ ಸುಮಂತ್ ಎಸ್ ಕೋಟೆ, ಮನ್ವಿತ್ , ಎ ಅಮೀನ್ ಅಹ್ಮದ್ , ಚೇತನ್ ಎಂ , ಗುರುರಾಜ್ ಕೆ ಮತ್ತು ವಿನಯ್ ಬಿ ಪಿ ಈ ಪ್ರಾಜೆಕ್ಟ್ ತಂಡದ ಸದಸ್ಯರಾಗಿದ್ದಾರೆ.


ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗವು ಎಂ ಕ್ಯಾಮ್ ( ಸ್ಮಾರ್ಟ್ ಸೆಕ್ಯೂರಿಟಿ ಕ್ಯಾಮೆರಾ ) ಎಂಬ ಪ್ರಬಂಧ ಪ್ರಸ್ತುತಪಡಿಸಿದ್ದು, ಈ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಲಭಿಸಿದೆ. ಅಭಿಷೇಕ್ ಪ್ರಶಾಂತ್ ಮತ್ತು ರವಿಶಂಕರ್ ಪಾಟೀಲ್ ಈ ತಂಡದ ಸದಸ್ಯರಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ , ವ್ಯವಸ್ಥಾಪಕ ಚಂದ್ರನಾಥ್ ಜೈನ್, ವಿಭಾಗ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

Related posts

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya
error: Content is protected !!