ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು. ಧರ್ಮಸ್ಥಳ ಬಿ ಒಕ್ಕೂಟದ ಸಭೆಯನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತ್ರಾವತಿ ಸಭಾಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಸಂಘದ ಸದಸ್ಯೆ ಭವಾನಿಯವರ ಮನೆಯ ಗೋಡೆಯು ವಿಪರೀತ ಮಳೆಯಿಂದ ಕುಸಿದು ಬಿದ್ದ ಕಾರಣ ಶ್ರೀ ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿರುವ ರೂ 10000 ಸಹಾಯಧನದ ಚೆಕ್ ವಿತರಣೆಯನ್ನು ಯೋಜನಾಧಿಕಾರಿ ಸುರೇಂದ್ರ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ದಿನೇಶ್ ಹಾಗೂ ಶಾಂಭವಿ ರೈ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಸೇವಾ ಪ್ರತಿನಿಧಿ ಕವಿತಾ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ದಾಖಲಾತಿ ಸಮಿತಿಯವರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!