23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

ಬೆಳ್ತಂಗಡಿ: ತಾಲೂಕು ಆಶಾ ಕಾರ್ಯಕರ್ತರ ಸಭೆಯು ಸೆ.28ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆವಿ ಭಟ್ ಮಾತನಾಡಿ ಆಶಾ ಕಾರ್ಯಕರ್ತೆಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಕೊರೋನ ಸಂದರ್ಭದಲ್ಲಿ ಬೀದಿಗಿಳಿದು ಜನರ ಸೇವೆ ಮಾಡಿದ್ದಾರೆ. ಆಶಾಕಾರ್ಯಕರ್ತೆಯರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಉಚಿತವಾದ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು. ಮುಂದೆ ನಡೆಯುವಂತಹ ಹೋರಾಟಗಳಲ್ಲಿ ನಾವೆಲ್ಲರೂ ಒಟ್ಟಾದರೆ ಮಾತ್ರ ನಮ್ಮ ಬೇಡಿಕೆಗಳಿಗೆ ಸರಕಾರ ಸ್ಪಂದಿಸುತ್ತದೆ ಎಂದರು.

ಈ ವೇಳೆ ಅ.26-27 ರಂದು ಮೈಸೂರಿನಲ್ಲಿ ನಡೆಯಲಿರುವ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನದ ಪೋಸ್ಟರ್ ನ್ನು ಬಿಡುಗಡೆಗೊಳಿಸಲಾಯಿತು.

ವೇದಿಕೆಯಲ್ಲಿ ಎಐಯುಟಿಯುಸಿ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮೀ, ನಗರ ಪಂಚಾಯತ್ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕು ಯೂನಿಯನ್ ಅಧ್ಯಕ್ಷೆ ಎಂ.ಎನ್. ಗುಲಾಬಿ ಸ್ವಾಗತಿಸಿ, ಉಪಾಧ್ಯಕ್ಷೆ ಹೇಮಲತಾ ಶೆಟ್ಟಿ ನಿರೂಪಿಸಿ, ಕಾರ್ಯದರ್ಶಿ ಕೇಶವತಿ ಧನ್ಯವಾದವಿತ್ತರು.

Related posts

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!